<p>ಹೊಸಪೇಟೆ: ರೈತರಿಗೆ ಎಫ್ಐಡಿ ಗೊಂದಲ ನಿವಾರಿಸಿ ಯೂರಿಯಾ, ಇತರ ರಸಗೊಬ್ಬರಗಳನ್ನು ಈ ಹಿಂದೆ ನೀಡುತ್ತಿದ್ದಂತೆ ಒದಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತರ ಸಂಘ ಮತ್ತು ಹಸಿರು ಸೇನೆ (ಕಾರ್ತಿಕ್ ಬಣ) ವತಿಯಿಂದ ಜಂಟಿ ಕೃಷಿ ನಿರ್ದೇಶಕರ ಮೂಲಕ ಕೃಷಿ ಸಚಿವರಿಗೆ ಮನವಿ ಸಲ್ಲಿಸಲಾಯಿತು.</p>.<p>ಸಂಘದ ಮಹಿಳಾ ಜಿಲ್ಲಾ ಅಧ್ಯಕ್ಷೆ ಜೆ.ಉಮಾದೇವಿ, ಉಪಾಧ್ಯಕ್ಷ ಜಗನ್ ರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಲ್.ಎಸ್.ರುದ್ರಪ್ಪ ಅವರಿದ್ದ ನಿಯೋಗ ಮಂಗಳವಾರ ಜೆ.ಡಿ ಅವರ ಕಚೇರಿಗೆ ತೆರಳಿ ಈ ಮನವಿ ಸಲ್ಲಿಸಿತು.</p>.<p>ರೈತರ ಬೆಳೆಗಳ ಅವಶ್ಯಕತೆಗೆ ತಕ್ಕಂತೆ ಯೂರಿಯಾ ಮತ್ತು ರಸಗೊಬ್ಬರಗಳನ್ನು ಮಾರುಕಟ್ಟೆಯಲ್ಲಿ ದಾಸ್ತಾನು ಲಭ್ಯವಿರುವಂತೆ ಸರ್ಕಾರ ನೋಡಿಕೊಳ್ಳಬೇಕು, ರಸಗೊಬ್ಬರದ ಜತೆಗೆ ಲಿಂಕ್ ಉತ್ಪನ್ನಗಳನ್ನು ಖರೀದಿಸಬೇಕೆಂದು ಒತ್ತಡ ಹೇರುವ ವಿತರಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-25-1774569274</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಪೇಟೆ: ರೈತರಿಗೆ ಎಫ್ಐಡಿ ಗೊಂದಲ ನಿವಾರಿಸಿ ಯೂರಿಯಾ, ಇತರ ರಸಗೊಬ್ಬರಗಳನ್ನು ಈ ಹಿಂದೆ ನೀಡುತ್ತಿದ್ದಂತೆ ಒದಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತರ ಸಂಘ ಮತ್ತು ಹಸಿರು ಸೇನೆ (ಕಾರ್ತಿಕ್ ಬಣ) ವತಿಯಿಂದ ಜಂಟಿ ಕೃಷಿ ನಿರ್ದೇಶಕರ ಮೂಲಕ ಕೃಷಿ ಸಚಿವರಿಗೆ ಮನವಿ ಸಲ್ಲಿಸಲಾಯಿತು.</p>.<p>ಸಂಘದ ಮಹಿಳಾ ಜಿಲ್ಲಾ ಅಧ್ಯಕ್ಷೆ ಜೆ.ಉಮಾದೇವಿ, ಉಪಾಧ್ಯಕ್ಷ ಜಗನ್ ರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಲ್.ಎಸ್.ರುದ್ರಪ್ಪ ಅವರಿದ್ದ ನಿಯೋಗ ಮಂಗಳವಾರ ಜೆ.ಡಿ ಅವರ ಕಚೇರಿಗೆ ತೆರಳಿ ಈ ಮನವಿ ಸಲ್ಲಿಸಿತು.</p>.<p>ರೈತರ ಬೆಳೆಗಳ ಅವಶ್ಯಕತೆಗೆ ತಕ್ಕಂತೆ ಯೂರಿಯಾ ಮತ್ತು ರಸಗೊಬ್ಬರಗಳನ್ನು ಮಾರುಕಟ್ಟೆಯಲ್ಲಿ ದಾಸ್ತಾನು ಲಭ್ಯವಿರುವಂತೆ ಸರ್ಕಾರ ನೋಡಿಕೊಳ್ಳಬೇಕು, ರಸಗೊಬ್ಬರದ ಜತೆಗೆ ಲಿಂಕ್ ಉತ್ಪನ್ನಗಳನ್ನು ಖರೀದಿಸಬೇಕೆಂದು ಒತ್ತಡ ಹೇರುವ ವಿತರಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-25-1774569274</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>