ಜಮ್ಮು: ಜಮ್ಮು ಕಾಶ್ಮೀರದ ಬಂದಿಪೋರಾ ಜಿಲ್ಲೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಈ ವೇಳೆ ಒಬ್ಬ ಯೋಧ ಹುತಾತ್ಮರಾಗಿದ್ದಾರೆ.
ಇದೇ ವೇಳೆ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಕೈಗೊಂಡ ಭಾರತೀಯ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.
ಬಂದೀಪೋರಾ ಜಿಲ್ಲೆಗೆ ಹೊಂದಿಕೊಂಡಂತೆ ಪನಾರ್ ಅರಣ್ಯದಲ್ಲಿ ಉಗ್ರರು ಬೀಡು ಬಿಟ್ಟಿರುವ ವಿಷಯ ತಿಳಿದ ಪಡೆ ಕಾರ್ಯಾಚರಣೆ ಕೈಗೊಂಡಿತ್ತು. ಉಗ್ರರು ಅಡಗಿರುವ ಶಂಕೆ ವ್ತಕ್ತವಾಗಿದ್ದು, ಸಿಆರ್ಪಿಎಫ್ ಮತ್ತು ರಾಷ್ಟ್ರೀಯ ರೈಫಲ್ಸ್ ಪಡೆ ಕಾರ್ಯಾಚರಣೆ ಮುಂದುವರೆಸಿದೆ.
#Visuals Jammu & Kashmir: One army personnel dead and two terrorists killed during an ongoing operation in Bandipora's Panar forest area. (Visuals deferred by unspecified time) pic.twitter.com/cYByGzFn6X