<p>ನಂಜನಗೂಡು: ‘ನೈಸರ್ಗಿಕ ಕೃಷಿ ಮತ್ತು ಮಣ್ಣಿನ ಆರೋಗ್ಯ ರಕ್ಷಣೆ ಇಂದಿನ ಅಗತ್ಯ’ ಎಂದು ಧಾರವಾಡ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಪಿ.ಎಲ್.ಪಾಟೀಲ್ ಹೇಳಿದರು.</p>.<p>ಸುತ್ತೂರಿನಲ್ಲಿ ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠ, ಶಿವರಾತ್ರೀಶ್ವರ ಧಾರ್ಮಿಕ ದತ್ತಿ ಹಾಗೂ ಜೆಎಸ್ಎಸ್ ಮಹಾವಿದ್ಯಾಪೀಠಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ರೈತರ ಶಿಬಿರ ಸಮಾರೋಪದಲ್ಲಿ ಭಾನುವಾರ ಅವರು ಮಾತನಾಡಿದರು.</p>.<p>‘ಭೂಮಿಯ ಜೀವನಾಡಿ ರೈತ ಸಮೃದ್ಧಿಯಾಗಿದ್ದರೆ ಮಾತ್ರ ದೇಶ ಸುಭಿಕ್ಷವಾಗಿರುತ್ತದೆ. ರೈತರು ಕೇವಲ ಬೆವರಿನಿಂದ ಕೆಲಸ ಮಾಡುವುದಷ್ಟೇ ಅಲ್ಲ, ಜ್ಞಾನದಿಂದ ಕೆಲಸ ಮಾಡಬೇಕು. ಭೂಮಿಯ ಆರೋಗ್ಯಕ್ಕೆ, ಕೃಷಿಗೆ ಏನು ಮುಖ್ಯ ಎಂಬುದನ್ನು ತಿಳಿದಿರಬೇಕು’ ಎಂದು ಸಲಹೆ ನೀಡಿದರು.</p>.<p>ಮಂಡ್ಯದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಜಿ.ಎಂ.ದೇವಗಿರಿ ಮಾತನಾಡಿ, ‘ರೈತರು ತಮ್ಮ ಜಮೀನಿನ ಒಂದು ಭಾಗದಲ್ಲಾದರೂ ಹೊಸ ಪ್ರಯೋಗಗಳನ್ನು ಮಾಡಲು ಮುಂದಾಗಬೇಕು. ಬೆಳೆಯನ್ನು ಹಾಗೆಯೇ ಮಾರುವ ಬದಲು ಮೌಲ್ಯವರ್ಧನೆಗೆ ಒತ್ತು ನೀಡಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಬೀದರ್ನ ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ನಿವೃತ್ತ ವಿಸ್ತರಣ ನಿರ್ದೇಶಕ ಎಸ್.ಎಂ.ಶಿವಪ್ರಕಾಶ್, ಕೃಷಿ ಉತ್ಪನ್ನಗಳ ರಫ್ತುದಾರ ಎಚ್.ನಾಗೇಂದ್ರ ಕುಮಾರ್ ಮಾತನಾಡಿದರು.</p>.<p>ಗಣೇಶ್, ಕಾವೇರಮ್ಮ ಬೈಲೆಮನೆ, ಅನಂತರಾಮಸ್ವಾಮಿ, ಜಗದೀಶ್ ಎಸ್.ಹಿರೇಮಠ್, ಶಿವಕುಮಾರ್, ಬಿ.ಎನ್.ಜ್ಞಾನೇಶ್, ಪೃಥ್ವಿ, ಯು.ಎಂ.ರಕ್ಷಿತ್ ರಾಜ್, ದೀಪಕ್, ವೈ.ಪಿ.ಪ್ರಸಾದ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-38-681723508</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಂಜನಗೂಡು: ‘ನೈಸರ್ಗಿಕ ಕೃಷಿ ಮತ್ತು ಮಣ್ಣಿನ ಆರೋಗ್ಯ ರಕ್ಷಣೆ ಇಂದಿನ ಅಗತ್ಯ’ ಎಂದು ಧಾರವಾಡ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಪಿ.ಎಲ್.ಪಾಟೀಲ್ ಹೇಳಿದರು.</p>.<p>ಸುತ್ತೂರಿನಲ್ಲಿ ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠ, ಶಿವರಾತ್ರೀಶ್ವರ ಧಾರ್ಮಿಕ ದತ್ತಿ ಹಾಗೂ ಜೆಎಸ್ಎಸ್ ಮಹಾವಿದ್ಯಾಪೀಠಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ರೈತರ ಶಿಬಿರ ಸಮಾರೋಪದಲ್ಲಿ ಭಾನುವಾರ ಅವರು ಮಾತನಾಡಿದರು.</p>.<p>‘ಭೂಮಿಯ ಜೀವನಾಡಿ ರೈತ ಸಮೃದ್ಧಿಯಾಗಿದ್ದರೆ ಮಾತ್ರ ದೇಶ ಸುಭಿಕ್ಷವಾಗಿರುತ್ತದೆ. ರೈತರು ಕೇವಲ ಬೆವರಿನಿಂದ ಕೆಲಸ ಮಾಡುವುದಷ್ಟೇ ಅಲ್ಲ, ಜ್ಞಾನದಿಂದ ಕೆಲಸ ಮಾಡಬೇಕು. ಭೂಮಿಯ ಆರೋಗ್ಯಕ್ಕೆ, ಕೃಷಿಗೆ ಏನು ಮುಖ್ಯ ಎಂಬುದನ್ನು ತಿಳಿದಿರಬೇಕು’ ಎಂದು ಸಲಹೆ ನೀಡಿದರು.</p>.<p>ಮಂಡ್ಯದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಜಿ.ಎಂ.ದೇವಗಿರಿ ಮಾತನಾಡಿ, ‘ರೈತರು ತಮ್ಮ ಜಮೀನಿನ ಒಂದು ಭಾಗದಲ್ಲಾದರೂ ಹೊಸ ಪ್ರಯೋಗಗಳನ್ನು ಮಾಡಲು ಮುಂದಾಗಬೇಕು. ಬೆಳೆಯನ್ನು ಹಾಗೆಯೇ ಮಾರುವ ಬದಲು ಮೌಲ್ಯವರ್ಧನೆಗೆ ಒತ್ತು ನೀಡಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಬೀದರ್ನ ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ನಿವೃತ್ತ ವಿಸ್ತರಣ ನಿರ್ದೇಶಕ ಎಸ್.ಎಂ.ಶಿವಪ್ರಕಾಶ್, ಕೃಷಿ ಉತ್ಪನ್ನಗಳ ರಫ್ತುದಾರ ಎಚ್.ನಾಗೇಂದ್ರ ಕುಮಾರ್ ಮಾತನಾಡಿದರು.</p>.<p>ಗಣೇಶ್, ಕಾವೇರಮ್ಮ ಬೈಲೆಮನೆ, ಅನಂತರಾಮಸ್ವಾಮಿ, ಜಗದೀಶ್ ಎಸ್.ಹಿರೇಮಠ್, ಶಿವಕುಮಾರ್, ಬಿ.ಎನ್.ಜ್ಞಾನೇಶ್, ಪೃಥ್ವಿ, ಯು.ಎಂ.ರಕ್ಷಿತ್ ರಾಜ್, ದೀಪಕ್, ವೈ.ಪಿ.ಪ್ರಸಾದ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-38-681723508</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>