<p>ರಾಯಚೂರು: ‘ಮನುಷ್ಯನಿಗೆ ಕೃಷಿಯೇ ಜೀವನಾಧಾರ. ಛಲವೊಂದಿದ್ದರೆ ಕೃಷಿಯಲ್ಲೂ ಸಾಧನೆ ಮಾಡಬಹುದಾಗಿದೆ’ ಎಂದು ಸಾವಯವ ಕೃಷಿ ತಜ್ಞೆ ಕವಿತಾ ಮಿಶ್ರಾ ಹೇಳಿದರು.</p>.<p>ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾಜಶಾಸ್ತ್ರ ವಿಭಾಗ ಮತ್ತು ಆಂತರಿಕ ಗುಣಮಟ್ಟ ಕೋಶದ ಸಹಯೋಗದಲ್ಲಿ ‘ಕೃಷಿ ಕ್ಷೇತ್ರದಲ್ಲಿ ಕವಿತಾ ಮಿಶ್ರಾರವರ ಸವಾಲುಗಳು ಮತ್ತು ಸಾಧನೆ’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ನಾನು ಎಂಜಿನಿಯರಿಂಗ್ ಪದವಿ ಪಡೆದು ಸಾಫ್ಟ್ವೇರ್ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಅವಕಾಶ ದೊರೆತರೂ ಮದುವೆ ನಂತರ ಪತಿಯ ಮನೆತನದ ಸಂಸ್ಕಾರದಿಂದ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಕೃಷಿಯಲ್ಲಿ ಪ್ರಗತಿ ಸಾಧಿಸಲು ಪ್ರಯತ್ನಿಸಿದೆ’ ಎಂದು ವಿವರಿಸಿದರು.</p>.<p>‘ಕೃಷಿ ಜೀವನ ಎಲ್ಲಕ್ಕಿಂತ ಶ್ರೇಷ್ಠ. ಯಾರಾದರೂ ನಮ್ಮ ಕೈ ಹಿಡಿದು ಬಿಡಬಹುದು. ಆದರೆ, ನಾನು ಕೈ ಹಿಡಿದ ಮಣ್ಣು ನನ್ನ ಕೈ ಬಿಡದೆ ಯಶಸ್ಸು ಕೊಟ್ಟಿದೆ. ಭೂ ತಾಯಿ ಸೇವೆ ಎಂದೆಂದಿಗೂ ಶ್ರೇಷ್ಠ’ ಎಂದು ತಿಳಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ಯಂಕಣ್ಣ ಮಾತನಾಡಿದರು.</p>.<p>ಆಂತರಿಕ ಗುಣಮಟ್ಟ ಕೋಶದ ಸಂಯೋಜಕ ಪ್ರೊ.ಮಹಾಂತೇಶ ಅಂಗಡಿ, ರಾಜ್ಯಶಾಸ್ತ್ರ ವಿಭಾಗದ ಪ್ರೊ.ಸಾವಿತ್ರಿ, ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಸುಭಾಷಚಂದ್ರ ಪಾಟೀಲ, ಉಪನ್ಯಾಸಕ ಡಾ.ತಿಮ್ಮಪ್ಪ ಎನ್.ವಡ್ಡೇಪಲ್ಲಿ ಹಾಗೂ ವಿವಿಧ ವಿಭಾಗಗಳ ಪ್ರಾಧ್ಯಾಪಕರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-32-1147912228</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ‘ಮನುಷ್ಯನಿಗೆ ಕೃಷಿಯೇ ಜೀವನಾಧಾರ. ಛಲವೊಂದಿದ್ದರೆ ಕೃಷಿಯಲ್ಲೂ ಸಾಧನೆ ಮಾಡಬಹುದಾಗಿದೆ’ ಎಂದು ಸಾವಯವ ಕೃಷಿ ತಜ್ಞೆ ಕವಿತಾ ಮಿಶ್ರಾ ಹೇಳಿದರು.</p>.<p>ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾಜಶಾಸ್ತ್ರ ವಿಭಾಗ ಮತ್ತು ಆಂತರಿಕ ಗುಣಮಟ್ಟ ಕೋಶದ ಸಹಯೋಗದಲ್ಲಿ ‘ಕೃಷಿ ಕ್ಷೇತ್ರದಲ್ಲಿ ಕವಿತಾ ಮಿಶ್ರಾರವರ ಸವಾಲುಗಳು ಮತ್ತು ಸಾಧನೆ’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ನಾನು ಎಂಜಿನಿಯರಿಂಗ್ ಪದವಿ ಪಡೆದು ಸಾಫ್ಟ್ವೇರ್ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಅವಕಾಶ ದೊರೆತರೂ ಮದುವೆ ನಂತರ ಪತಿಯ ಮನೆತನದ ಸಂಸ್ಕಾರದಿಂದ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಕೃಷಿಯಲ್ಲಿ ಪ್ರಗತಿ ಸಾಧಿಸಲು ಪ್ರಯತ್ನಿಸಿದೆ’ ಎಂದು ವಿವರಿಸಿದರು.</p>.<p>‘ಕೃಷಿ ಜೀವನ ಎಲ್ಲಕ್ಕಿಂತ ಶ್ರೇಷ್ಠ. ಯಾರಾದರೂ ನಮ್ಮ ಕೈ ಹಿಡಿದು ಬಿಡಬಹುದು. ಆದರೆ, ನಾನು ಕೈ ಹಿಡಿದ ಮಣ್ಣು ನನ್ನ ಕೈ ಬಿಡದೆ ಯಶಸ್ಸು ಕೊಟ್ಟಿದೆ. ಭೂ ತಾಯಿ ಸೇವೆ ಎಂದೆಂದಿಗೂ ಶ್ರೇಷ್ಠ’ ಎಂದು ತಿಳಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ಯಂಕಣ್ಣ ಮಾತನಾಡಿದರು.</p>.<p>ಆಂತರಿಕ ಗುಣಮಟ್ಟ ಕೋಶದ ಸಂಯೋಜಕ ಪ್ರೊ.ಮಹಾಂತೇಶ ಅಂಗಡಿ, ರಾಜ್ಯಶಾಸ್ತ್ರ ವಿಭಾಗದ ಪ್ರೊ.ಸಾವಿತ್ರಿ, ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಸುಭಾಷಚಂದ್ರ ಪಾಟೀಲ, ಉಪನ್ಯಾಸಕ ಡಾ.ತಿಮ್ಮಪ್ಪ ಎನ್.ವಡ್ಡೇಪಲ್ಲಿ ಹಾಗೂ ವಿವಿಧ ವಿಭಾಗಗಳ ಪ್ರಾಧ್ಯಾಪಕರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-32-1147912228</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>