<p>ಬಿಡದಿ: ಹೋಬಳಿಯಾದ್ಯಂತ ಮಾವು ಬೆಳೆಗಾರರು ಈ ಬಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ.</p>.<p>ಪ್ರಸಕ್ತ ವರ್ಷದ ಆರಂಭದಲ್ಲಿ ಮಾವಿನ ಮರಗಳು ಉತ್ತಮವಾಗಿ ಹೂವು ಬಿಟ್ಟಿದ್ದವು. ಇದನ್ನು ಕಂಡು ರೈತರು ಈ ಬಾರಿ ಬಂಪರ್ ಲಾಭದ ನಿರೀಕ್ಷೆಯಲ್ಲಿದ್ದರು. ಆದರೆ, ಹವಾಮಾನ ವೈಪರೀತ್ಯದಿಂದಾಗಿ ಹೂವುಗಳು ಕಾಯಿ ಕಟ್ಟಲಿಲ್ಲ. ಅಲ್ಪಸ್ವಲ್ಪ ಕಾಯಿ ಬಿಟ್ಟಿದ್ದರೂ, ಸಮಯಕ್ಕೆ ಸರಿಯಾಗಿ ಮಳೆ ಬೀಳದ ಕಾರಣ ಕಾಯಿಗಳು ಗಾತ್ರವೂ ಕುಸಿದಿವೆ.</p>.<p>ರಫ್ತಿಗೆ ಹೊಡೆತ: ಬಾದಾಮಿ, ಮಲಗೋಬಾ ಹಾಗೂ ರಸಪುರಿಯಂತಹ ತಳಿಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗುವ ನಿರೀಕ್ಷೆಯಿತ್ತು. ಆದರೆ ವಿದೇಶಗಳಲ್ಲಿ ನಡೆಯುತ್ತಿರುವ ಯುದ್ಧದ ಸನ್ನಿವೇಶಗಳಿಂದಾಗಿ ಮಾವಿನ ರಫ್ತು ಪ್ರಕ್ರಿಯೆಗೆ ಭಾರಿ ಹಿನ್ನಡೆಯಾಗಿದೆ. ಸ್ಥಳೀಯ ಮಾರುಕಟ್ಟೆಯಲ್ಲಿಯೂ ಬೆಲೆ ಗಗನಕ್ಕೇರಿರುವುದರಿಂದ ಜನರು ಹಣ್ಣು ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ.</p>.<p>‘ನಮ್ಮ ತೋಟದಲ್ಲಿ 120 ಮಾವಿನ ಮರಗಳಿವೆ. ಔಷಧಿಗೆ ₹30 ಸಾವಿರ ಹಾಗೂ ನಿರ್ವಹಣೆಗೆ ₹25 ಸಾವಿರ ಖರ್ಚು ಮಾಡಿದ್ದೇನೆ. ಲಾಭದ ಮಾತಿರಲಿ, ಅಸಲು ಕೂಡ ವಾಪಸ್ ಬರುವ ಲಕ್ಷಣಗಳಿಲ್ಲ’ ಎಂದು ರೈತ ಮುನಿರಾಜು ಅಳಲು ತೋಡಿಕೊಂಡರು.</p>.<p>ನೆರವಿಗೆ ಆಗ್ರಹ: ಸೂಕ್ತ ಮಾರುಕಟ್ಟೆ ಬೆಲೆ ಇಲ್ಲದೆ ರೈತರು ಹಣ್ಣುಗಳನ್ನು ಕಟಾವು ಮಾಡಲು ಆಸಕ್ತಿ ತೋರುತ್ತಿಲ್ಲ. ಇದರಿಂದಾಗಿ ಮರದಲ್ಲಿಯೇ ಹಣ್ಣಾಗಿ ಕೆಳಗೆ ಉದುರುತ್ತಿವೆ. ಈ ಪರಿಸ್ಥಿತಿ ಕಂಡು ಕಂಗಾಲಾಗಿರುವ ರೈತರು ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಮಾವು ಬೆಳೆಗಾರರಿಗೆ ಬೆಂಬಲ ಬೆಲೆ ಘೋಷಿಸಬೇಕು ಹಾಗೂ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-14-717033756</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಿಡದಿ: ಹೋಬಳಿಯಾದ್ಯಂತ ಮಾವು ಬೆಳೆಗಾರರು ಈ ಬಾರಿ ಸಂಕಷ್ಟಕ್ಕೆ ಸಿಲುಕಿದ್ದಾರೆ.</p>.<p>ಪ್ರಸಕ್ತ ವರ್ಷದ ಆರಂಭದಲ್ಲಿ ಮಾವಿನ ಮರಗಳು ಉತ್ತಮವಾಗಿ ಹೂವು ಬಿಟ್ಟಿದ್ದವು. ಇದನ್ನು ಕಂಡು ರೈತರು ಈ ಬಾರಿ ಬಂಪರ್ ಲಾಭದ ನಿರೀಕ್ಷೆಯಲ್ಲಿದ್ದರು. ಆದರೆ, ಹವಾಮಾನ ವೈಪರೀತ್ಯದಿಂದಾಗಿ ಹೂವುಗಳು ಕಾಯಿ ಕಟ್ಟಲಿಲ್ಲ. ಅಲ್ಪಸ್ವಲ್ಪ ಕಾಯಿ ಬಿಟ್ಟಿದ್ದರೂ, ಸಮಯಕ್ಕೆ ಸರಿಯಾಗಿ ಮಳೆ ಬೀಳದ ಕಾರಣ ಕಾಯಿಗಳು ಗಾತ್ರವೂ ಕುಸಿದಿವೆ.</p>.<p>ರಫ್ತಿಗೆ ಹೊಡೆತ: ಬಾದಾಮಿ, ಮಲಗೋಬಾ ಹಾಗೂ ರಸಪುರಿಯಂತಹ ತಳಿಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗುವ ನಿರೀಕ್ಷೆಯಿತ್ತು. ಆದರೆ ವಿದೇಶಗಳಲ್ಲಿ ನಡೆಯುತ್ತಿರುವ ಯುದ್ಧದ ಸನ್ನಿವೇಶಗಳಿಂದಾಗಿ ಮಾವಿನ ರಫ್ತು ಪ್ರಕ್ರಿಯೆಗೆ ಭಾರಿ ಹಿನ್ನಡೆಯಾಗಿದೆ. ಸ್ಥಳೀಯ ಮಾರುಕಟ್ಟೆಯಲ್ಲಿಯೂ ಬೆಲೆ ಗಗನಕ್ಕೇರಿರುವುದರಿಂದ ಜನರು ಹಣ್ಣು ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ.</p>.<p>‘ನಮ್ಮ ತೋಟದಲ್ಲಿ 120 ಮಾವಿನ ಮರಗಳಿವೆ. ಔಷಧಿಗೆ ₹30 ಸಾವಿರ ಹಾಗೂ ನಿರ್ವಹಣೆಗೆ ₹25 ಸಾವಿರ ಖರ್ಚು ಮಾಡಿದ್ದೇನೆ. ಲಾಭದ ಮಾತಿರಲಿ, ಅಸಲು ಕೂಡ ವಾಪಸ್ ಬರುವ ಲಕ್ಷಣಗಳಿಲ್ಲ’ ಎಂದು ರೈತ ಮುನಿರಾಜು ಅಳಲು ತೋಡಿಕೊಂಡರು.</p>.<p>ನೆರವಿಗೆ ಆಗ್ರಹ: ಸೂಕ್ತ ಮಾರುಕಟ್ಟೆ ಬೆಲೆ ಇಲ್ಲದೆ ರೈತರು ಹಣ್ಣುಗಳನ್ನು ಕಟಾವು ಮಾಡಲು ಆಸಕ್ತಿ ತೋರುತ್ತಿಲ್ಲ. ಇದರಿಂದಾಗಿ ಮರದಲ್ಲಿಯೇ ಹಣ್ಣಾಗಿ ಕೆಳಗೆ ಉದುರುತ್ತಿವೆ. ಈ ಪರಿಸ್ಥಿತಿ ಕಂಡು ಕಂಗಾಲಾಗಿರುವ ರೈತರು ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಮಾವು ಬೆಳೆಗಾರರಿಗೆ ಬೆಂಬಲ ಬೆಲೆ ಘೋಷಿಸಬೇಕು ಹಾಗೂ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-14-717033756</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>