<p>ಸಾಗರ: ‘ಮಾವಿನ ವೈವಿಧ್ಯಮಯ ತಳಿಗಳ ಅಧ್ಯಯನದತ್ತ ಮಲೆನಾಡಿನ ಕೃಷಿಕರು ಆಸಕ್ತಿ ತೋರಬೇಕಿದೆ’ ಎಂದು ಕೃಷಿ ತಜ್ಞ ಅನಂತಮೂರ್ತಿ ಜವಳಿ ಹೇಳಿದರು.</p>.<p>ತಾಲ್ಲೂಕಿನ ಹೆಗ್ಗೋಡಿನ ಸಮೀಪದ ಕೋಣನಕಟ್ಟೆ ಗ್ರಾಮದ ನಟೇಶ್ ಅವರ ಮಾವಿನ ತೋಟದಲ್ಲಿ ತಾಲ್ಲೂಕು ಕೃಷಿಕ ಸಮಾಜ ಸೋಮವಾರ ಏರ್ಪಡಿಸಿದ್ದ ‘ಮಾವಿನ ಮಿಡಿ ಕೃಷಿ’ ಕುರಿತ ಮಾಹಿತಿ ಶಿಬಿರದಲ್ಲಿ ಮಾತನಾಡಿದರು.</p>.<p>‘ಮಲೆನಾಡಿನ ವಾತಾವರಣಕ್ಕೆ ಯಾವ ತಳಿಯ ಮಾವು ಸೂಕ್ತ ಎಂಬುದರ ಮಾಹಿತಿ ಪಡೆದು ಅಂತಹ ತಳಿಗಳ ಅಭಿವೃದ್ಧಿಗೆ ಒತ್ತು ನೀಡಬೇಕಿದೆ. ಈ ಸಂಬಂಧ ಅಧ್ಯಯನವಿಲ್ಲದೆ ಬೆಳೆ ಬೆಳೆಯಲು ಮುಂದಾದರೆ ವೈಫಲ್ಯ ಅನುಭವಿಸಬೇಕಾಗುತ್ತದೆ’ ಎಂದು ಕಿವಿಮಾತು ಹೇಳಿದರು.</p>.<p>‘ಮಾವು ಬೆಳೆದ ನಂತರ ಮಾವಿನ ಮಿಡಿ ಅಥವಾ ಹಣ್ಣುಗಳ ಮಾರುಕಟ್ಟೆ ಕುರಿತು ಕೃಷಿಕರು ದೂರಗಾಮಿ ಯೋಜನೆಗಳನ್ನು ರೂಪಿಸಿಕೊಳ್ಳಬೇಕು. ಬೆಳೆದ ಉತ್ಪನ್ನಗಳ ಮೌಲ್ಯವರ್ಧನೆ ಕುರಿತು ಚಿಂತಿಸುವ ಅಗತ್ಯವಿದೆ’ ಎಂದು ಸಲಹೆ ನೀಡಿದರು.</p>.<p>‘ಮಲೆನಾಡಿನ ಪಾರಂಪರಿಕ ಕೃಷಿ ಪದ್ಧತಿಯನ್ನು ಉಳಿಸಿಕೊಳ್ಳುವ ಮೂಲಕ ಕಾಡು ಹಣ್ಣಿನ ಗಿಡಗಳನ್ನು ನಾವು ನಶಿಸದಂತೆ ನೋಡಿಕೊಳ್ಳಬೇಕಿದೆ. ಈ ಭಾಗದಲ್ಲಿ ವೈವಿಧ್ಯಮಯ ಅಪ್ಪೆಮಿಡಿಗಳನ್ನು ಗುರುತಿಸಲಾಗಿದ್ದು, ರೈತರು ಸೂಕ್ತ ಮಾಹಿತಿಯೊಂದಿಗೆ ಇವುಗಳನ್ನು ಬೆಳೆಯಲು ಮುಂದಾಗಬೇಕು’ ಎಂದು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಬಿ.ಎಸ್. ಮಹಾಬಲೇಶ್ವರ ಹೇಳಿದರು.</p>.<p>ಕೃಷಿಕ ಸಮಾಜದ ಅಧ್ಯಕ್ಷ ವಿ.ಜಿ. ಶ್ರೀಧರ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಗಣಪತಿ ಹೆನಗೆರೆ, ಖಜಾಂಚಿ ಲಿಂಗಪ್ಪ ಗೌಡ, ಕೃಷಿಕರಾದ ನಟೇಶ್, ಮಾಧವಿ, ಕೃಷಿ ಇಲಾಖೆಯ ಆತ್ಮ ಯೋಜನೆಯ ತಾಂತ್ರಿಕ ವ್ಯವಸ್ಥಾಪಕ ವಿನಾಯಕ ರಾವ್ ಬೇಳೂರು, ಕೃಷಿ ಅಧಿಕಾರಿ ಕೆ.ಆರ್. ರಮೇಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-42-1445738892</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ‘ಮಾವಿನ ವೈವಿಧ್ಯಮಯ ತಳಿಗಳ ಅಧ್ಯಯನದತ್ತ ಮಲೆನಾಡಿನ ಕೃಷಿಕರು ಆಸಕ್ತಿ ತೋರಬೇಕಿದೆ’ ಎಂದು ಕೃಷಿ ತಜ್ಞ ಅನಂತಮೂರ್ತಿ ಜವಳಿ ಹೇಳಿದರು.</p>.<p>ತಾಲ್ಲೂಕಿನ ಹೆಗ್ಗೋಡಿನ ಸಮೀಪದ ಕೋಣನಕಟ್ಟೆ ಗ್ರಾಮದ ನಟೇಶ್ ಅವರ ಮಾವಿನ ತೋಟದಲ್ಲಿ ತಾಲ್ಲೂಕು ಕೃಷಿಕ ಸಮಾಜ ಸೋಮವಾರ ಏರ್ಪಡಿಸಿದ್ದ ‘ಮಾವಿನ ಮಿಡಿ ಕೃಷಿ’ ಕುರಿತ ಮಾಹಿತಿ ಶಿಬಿರದಲ್ಲಿ ಮಾತನಾಡಿದರು.</p>.<p>‘ಮಲೆನಾಡಿನ ವಾತಾವರಣಕ್ಕೆ ಯಾವ ತಳಿಯ ಮಾವು ಸೂಕ್ತ ಎಂಬುದರ ಮಾಹಿತಿ ಪಡೆದು ಅಂತಹ ತಳಿಗಳ ಅಭಿವೃದ್ಧಿಗೆ ಒತ್ತು ನೀಡಬೇಕಿದೆ. ಈ ಸಂಬಂಧ ಅಧ್ಯಯನವಿಲ್ಲದೆ ಬೆಳೆ ಬೆಳೆಯಲು ಮುಂದಾದರೆ ವೈಫಲ್ಯ ಅನುಭವಿಸಬೇಕಾಗುತ್ತದೆ’ ಎಂದು ಕಿವಿಮಾತು ಹೇಳಿದರು.</p>.<p>‘ಮಾವು ಬೆಳೆದ ನಂತರ ಮಾವಿನ ಮಿಡಿ ಅಥವಾ ಹಣ್ಣುಗಳ ಮಾರುಕಟ್ಟೆ ಕುರಿತು ಕೃಷಿಕರು ದೂರಗಾಮಿ ಯೋಜನೆಗಳನ್ನು ರೂಪಿಸಿಕೊಳ್ಳಬೇಕು. ಬೆಳೆದ ಉತ್ಪನ್ನಗಳ ಮೌಲ್ಯವರ್ಧನೆ ಕುರಿತು ಚಿಂತಿಸುವ ಅಗತ್ಯವಿದೆ’ ಎಂದು ಸಲಹೆ ನೀಡಿದರು.</p>.<p>‘ಮಲೆನಾಡಿನ ಪಾರಂಪರಿಕ ಕೃಷಿ ಪದ್ಧತಿಯನ್ನು ಉಳಿಸಿಕೊಳ್ಳುವ ಮೂಲಕ ಕಾಡು ಹಣ್ಣಿನ ಗಿಡಗಳನ್ನು ನಾವು ನಶಿಸದಂತೆ ನೋಡಿಕೊಳ್ಳಬೇಕಿದೆ. ಈ ಭಾಗದಲ್ಲಿ ವೈವಿಧ್ಯಮಯ ಅಪ್ಪೆಮಿಡಿಗಳನ್ನು ಗುರುತಿಸಲಾಗಿದ್ದು, ರೈತರು ಸೂಕ್ತ ಮಾಹಿತಿಯೊಂದಿಗೆ ಇವುಗಳನ್ನು ಬೆಳೆಯಲು ಮುಂದಾಗಬೇಕು’ ಎಂದು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಬಿ.ಎಸ್. ಮಹಾಬಲೇಶ್ವರ ಹೇಳಿದರು.</p>.<p>ಕೃಷಿಕ ಸಮಾಜದ ಅಧ್ಯಕ್ಷ ವಿ.ಜಿ. ಶ್ರೀಧರ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಗಣಪತಿ ಹೆನಗೆರೆ, ಖಜಾಂಚಿ ಲಿಂಗಪ್ಪ ಗೌಡ, ಕೃಷಿಕರಾದ ನಟೇಶ್, ಮಾಧವಿ, ಕೃಷಿ ಇಲಾಖೆಯ ಆತ್ಮ ಯೋಜನೆಯ ತಾಂತ್ರಿಕ ವ್ಯವಸ್ಥಾಪಕ ವಿನಾಯಕ ರಾವ್ ಬೇಳೂರು, ಕೃಷಿ ಅಧಿಕಾರಿ ಕೆ.ಆರ್. ರಮೇಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-42-1445738892</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>