<p><strong>ಖಟಕಚಿಂಚೋಳಿ: </strong>ಸಮೀಪದ ಸಿಂದಬಂದಗಿ ಗ್ರಾಮದ ಯುವ ರೈತ ಮಲ್ಲಿಕಾರ್ಜುನ ಸ್ವಾಮಿ ತಮ್ಮ ಅರ್ಧ ಎಕರೆ ಹೊಲದಲ್ಲಿ ಅವರೆ ಬೆಳೆದಿದ್ದು ಕಡಿಮೆ ಖರ್ಚಿನಲ್ಲಿ ಹೆಚ್ಚು ಲಾಭ ಪಡೆಯುತ್ತಿದ್ದಾರೆ.</p>.<p>ಕೇವಲ ಮೂರು ತಿಂಗಳಲ್ಲಿ ಕಟಾವಿಗೆ ಬರುವ ಅವರೆ ಬೆಳೆಗೆ ಔಷಧ ಸಿಂಪಡಣೆ, ರಸಗೊಬ್ಬರ ಇನ್ನಿತರ ಖರ್ಚು ವೆಚ್ಚ ಸೇರಿ ₹15 ಸಾವಿರ ಆಗಿದೆ. ಆದರೆ ಆದಾಯ ಮಾತ್ರ ಲಕ್ಷಕ್ಕಿಂತ ಹೆಚ್ಚು ಲಭಿಸುತ್ತಿದೆ ಎಂದು ರೈತ ಮಲ್ಲಿಕಾರ್ಜುನ ಸಂತಸ ವ್ಯಕ್ತಪಡಿಸುತ್ತಾರೆ.</p>.<p>‘ಡಿಸೆಂಬರ್ ತಿಂಗಳಲ್ಲಿ ಬಿತ್ತನೆ ಮಾಡಿದ ಅವರೆಯನ್ನು ಸದ್ಯ ಮಾರುಕಟ್ಟೆಗೆ ಕಳುಹಿಸಲಾಗುತ್ತಿದೆ. ಮಾರುಕಟ್ಟೆಯಲ್ಲಿ ಅವರೆ ಪ್ರತಿ ಕ್ವಿಂಟಲ್ಗೆ ₹ 3 ಸಾವಿರ ಇದೆ. ಹೀಗಾಗಿ ನನಗೆ ನಿರೀಕ್ಷೆಗೂ ಮೀರಿ ಲಾಭ ಸಿಗುತ್ತಿದೆ’ ಎಂದು ರೈತ ಮಲ್ಲಿಕಾರ್ಜುನ ಪ್ರಜಾವಾಣಿಗೆ ತಿಳಿಸಿದರು.</p>.<p>ಅವರೆ ಬೆಳೆಯ ಜತೆಗೆ ಆಲೂಗಡ್ಡೆ ಸೇರಿದಂತೆ ಇತರೆ ತೋಟಗಾರಿಕಾ ಬೆಳೆಗಳನ್ನು ಮಿಶ್ರ ಬೆಳೆಯಾಗಿ ಬೆಳೆಯಬಹುದು. ಇದರಿಂದ ಒಂದೇ ಖರ್ಚಿನಲ್ಲಿ ಎರಡು ಆದಾಯ ಪಡೆಯುವುದರ ಜೆತೆಗೆ ಅವರೆ ಬೆಳೆಯುವುದರಿಂದ ಭೂಮಿ ಫಲವತ್ತಾಗುವುದು ಎಂದು ತಿಳಿಸಿದರು.</p>.<p>ಅವರೆಕಾಯಿ ಬೆಳೆಗೆ ಕೀಟಬಾಧೆಯ ಕಾಣಿಸಿಕೊಂಡರೆ ರೈತರು ಎದೆಗುಂದದೆ ಒಂದು ಲೀಟರ್ ನೀರಿಗೆ ಅರ್ಧ ಎಂ.ಎಲ್ ಫೇಮ್ ಮಿಶ್ರಣವನ್ನು ಸೇರಿಸಿ ಸಿಂಪಡಿಸಬೇಕು. ಅಥವಾ 1 ಲೀಟರ್ ನೀರಿಗೆ ಅರ್ಧ ಗ್ರಾಂ ಪ್ರೋಕ್ಲೆಮ್ ಬೆರೆಸಿ ಸಿಂಪಡಿಸಬೇಕು ಎಂದು ತೋಟಗಾರಿಕಾ ವಿಜ್ಞಾನಿ ಡಾ. ಮಲ್ಲಿಕಾರ್ಜುನ ನಿಂಗದಳ್ಳಿ ತಿಳಿಸುತ್ತಾರೆ.</p>.<p>ಕೊರೊನಾ ಹರಡುವುದನ್ನು ತಡೆಗಟ್ಟಲು ಲಾಕ್ಡೌನ್ ಘೋಷಣೆ ಮಾಡಲಾಗಿತ್ತು. ಇದರಿಂದ ವ್ಯಾಪಾರ ವಹಿವಾಟು ನಡೆಯದ ಸಮಯದಲ್ಲಿ ಮಲ್ಲಿಕಾರ್ಜುನ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡರು. ವಿದ್ಯಾವಂತರಾದ ಮಲ್ಲಿಕಾರ್ಜುನ ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಂಡು ಯಶಸ್ಸು ಕಾಣುತ್ತಿದ್ದಾರೆ ಎಂದು ಗ್ರಾಮದ ಯುವ ರೈತ ಶಿವಕುಮಾರ ರೆಡ್ಡಿ ತಿಳಿಸುತ್ತಾರೆ.</p>.<p>ಯುವಕರು ಕೆಲಸ ಹುಡುಕಿಕೊಂಡು ದೊಡ್ಡ ದೊಡ್ಡ ಪಟ್ಟಣಕ್ಕೆ ತೆರಳುವುದು ಸಾಮಾನ್ಯವಾಗಿದೆ. ಆದರೆ ಮಲ್ಲಿಕಾರ್ಜುನ ಕಡಿಮೆ ಭೂಮಿಯಲ್ಲಿ ಕೈ ತುಂಬಾ ಆದಾಯ ಪಡೆಯಬಹುದು ಎಂಬುವುದನ್ನು ತೋರಿಸಿಕೊಟ್ಟಿದ್ದಾರೆ. ಹೀಗಾಗಿ ಇವರು ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಗ್ರಾಮದ ಶಂಕರ ರೆಡ್ಡಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಖಟಕಚಿಂಚೋಳಿ: </strong>ಸಮೀಪದ ಸಿಂದಬಂದಗಿ ಗ್ರಾಮದ ಯುವ ರೈತ ಮಲ್ಲಿಕಾರ್ಜುನ ಸ್ವಾಮಿ ತಮ್ಮ ಅರ್ಧ ಎಕರೆ ಹೊಲದಲ್ಲಿ ಅವರೆ ಬೆಳೆದಿದ್ದು ಕಡಿಮೆ ಖರ್ಚಿನಲ್ಲಿ ಹೆಚ್ಚು ಲಾಭ ಪಡೆಯುತ್ತಿದ್ದಾರೆ.</p>.<p>ಕೇವಲ ಮೂರು ತಿಂಗಳಲ್ಲಿ ಕಟಾವಿಗೆ ಬರುವ ಅವರೆ ಬೆಳೆಗೆ ಔಷಧ ಸಿಂಪಡಣೆ, ರಸಗೊಬ್ಬರ ಇನ್ನಿತರ ಖರ್ಚು ವೆಚ್ಚ ಸೇರಿ ₹15 ಸಾವಿರ ಆಗಿದೆ. ಆದರೆ ಆದಾಯ ಮಾತ್ರ ಲಕ್ಷಕ್ಕಿಂತ ಹೆಚ್ಚು ಲಭಿಸುತ್ತಿದೆ ಎಂದು ರೈತ ಮಲ್ಲಿಕಾರ್ಜುನ ಸಂತಸ ವ್ಯಕ್ತಪಡಿಸುತ್ತಾರೆ.</p>.<p>‘ಡಿಸೆಂಬರ್ ತಿಂಗಳಲ್ಲಿ ಬಿತ್ತನೆ ಮಾಡಿದ ಅವರೆಯನ್ನು ಸದ್ಯ ಮಾರುಕಟ್ಟೆಗೆ ಕಳುಹಿಸಲಾಗುತ್ತಿದೆ. ಮಾರುಕಟ್ಟೆಯಲ್ಲಿ ಅವರೆ ಪ್ರತಿ ಕ್ವಿಂಟಲ್ಗೆ ₹ 3 ಸಾವಿರ ಇದೆ. ಹೀಗಾಗಿ ನನಗೆ ನಿರೀಕ್ಷೆಗೂ ಮೀರಿ ಲಾಭ ಸಿಗುತ್ತಿದೆ’ ಎಂದು ರೈತ ಮಲ್ಲಿಕಾರ್ಜುನ ಪ್ರಜಾವಾಣಿಗೆ ತಿಳಿಸಿದರು.</p>.<p>ಅವರೆ ಬೆಳೆಯ ಜತೆಗೆ ಆಲೂಗಡ್ಡೆ ಸೇರಿದಂತೆ ಇತರೆ ತೋಟಗಾರಿಕಾ ಬೆಳೆಗಳನ್ನು ಮಿಶ್ರ ಬೆಳೆಯಾಗಿ ಬೆಳೆಯಬಹುದು. ಇದರಿಂದ ಒಂದೇ ಖರ್ಚಿನಲ್ಲಿ ಎರಡು ಆದಾಯ ಪಡೆಯುವುದರ ಜೆತೆಗೆ ಅವರೆ ಬೆಳೆಯುವುದರಿಂದ ಭೂಮಿ ಫಲವತ್ತಾಗುವುದು ಎಂದು ತಿಳಿಸಿದರು.</p>.<p>ಅವರೆಕಾಯಿ ಬೆಳೆಗೆ ಕೀಟಬಾಧೆಯ ಕಾಣಿಸಿಕೊಂಡರೆ ರೈತರು ಎದೆಗುಂದದೆ ಒಂದು ಲೀಟರ್ ನೀರಿಗೆ ಅರ್ಧ ಎಂ.ಎಲ್ ಫೇಮ್ ಮಿಶ್ರಣವನ್ನು ಸೇರಿಸಿ ಸಿಂಪಡಿಸಬೇಕು. ಅಥವಾ 1 ಲೀಟರ್ ನೀರಿಗೆ ಅರ್ಧ ಗ್ರಾಂ ಪ್ರೋಕ್ಲೆಮ್ ಬೆರೆಸಿ ಸಿಂಪಡಿಸಬೇಕು ಎಂದು ತೋಟಗಾರಿಕಾ ವಿಜ್ಞಾನಿ ಡಾ. ಮಲ್ಲಿಕಾರ್ಜುನ ನಿಂಗದಳ್ಳಿ ತಿಳಿಸುತ್ತಾರೆ.</p>.<p>ಕೊರೊನಾ ಹರಡುವುದನ್ನು ತಡೆಗಟ್ಟಲು ಲಾಕ್ಡೌನ್ ಘೋಷಣೆ ಮಾಡಲಾಗಿತ್ತು. ಇದರಿಂದ ವ್ಯಾಪಾರ ವಹಿವಾಟು ನಡೆಯದ ಸಮಯದಲ್ಲಿ ಮಲ್ಲಿಕಾರ್ಜುನ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡರು. ವಿದ್ಯಾವಂತರಾದ ಮಲ್ಲಿಕಾರ್ಜುನ ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಂಡು ಯಶಸ್ಸು ಕಾಣುತ್ತಿದ್ದಾರೆ ಎಂದು ಗ್ರಾಮದ ಯುವ ರೈತ ಶಿವಕುಮಾರ ರೆಡ್ಡಿ ತಿಳಿಸುತ್ತಾರೆ.</p>.<p>ಯುವಕರು ಕೆಲಸ ಹುಡುಕಿಕೊಂಡು ದೊಡ್ಡ ದೊಡ್ಡ ಪಟ್ಟಣಕ್ಕೆ ತೆರಳುವುದು ಸಾಮಾನ್ಯವಾಗಿದೆ. ಆದರೆ ಮಲ್ಲಿಕಾರ್ಜುನ ಕಡಿಮೆ ಭೂಮಿಯಲ್ಲಿ ಕೈ ತುಂಬಾ ಆದಾಯ ಪಡೆಯಬಹುದು ಎಂಬುವುದನ್ನು ತೋರಿಸಿಕೊಟ್ಟಿದ್ದಾರೆ. ಹೀಗಾಗಿ ಇವರು ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಗ್ರಾಮದ ಶಂಕರ ರೆಡ್ಡಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>