<p><strong>ಬಳ್ಳಾರಿ:</strong>ಸುಕೋ ಬ್ಯಾಂಕ್ ಬೆಳ್ಳಿ ಹಬ್ಬದ ಅಂಗವಾಗಿ ನಗರದಲ್ಲಿ ಶನಿವಾರ ಮುಂಜಾನೆ ನಡೆದ ‘ಸುಸ್ಥಿರ ಕೃಷಿ’ಗಾಗಿ ಸಾವಿರದ ಓಟ ಸ್ಪರ್ಧೆಯಲ್ಲಿ ಬೆಂಗಳೂರಿನ ಲಕ್ಷ್ಮಣ (14:23:17) ಮೊದಲ ಗುರಿ ಮುಟ್ಟಿ ₹ 25 ಸಾವಿರ ನಗದು ಬಹುಮಾನವನ್ನು ತನ್ನದಾಗಿಸಿಕೊಂಡರು.</p>.<p>ಅವರಿಗೆ ಸರಿಸಮನಾಗಿ ಪೈಪೋಟಿ ನೀಡಿದ ಗದಗ್ನ ಮಹಾಂತೇಶ್ ಬಿಂಗಿ (14:24:92) ಎರಡನೇ ಸ್ಥಾನ ಪಡೆದು ₹ 15 ಸಾವಿರ ನಗದು ಬಹುಮಾನವನ್ನು ತನ್ನದಾಗಿಸಿಕೊಂಡರು. ಬೆಂಗಳೂರಿನ ಭಾನುಪ್ರಕಾಶ್ (14:26:14) ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟು ₹ 10 ಸಾವಿರ ನಗದು ಬಹುಮಾನ ಪಡೆದರು.</p>.<p>ಬಹುಮಾನ ಗಳಿಸಲು ಆಗದಿದ್ದರೂ ಮಹಿಳೆಯರ ವಿಭಾಗದಲ್ಲಿ ದಾವಣಗೆರೆಯ ಎ.ಅಕ್ಷತಾ (17:37:18) ಮೊದಲು ಗುರಿ ಮುಟ್ಟಿದರೆ, ಬಳ್ಳಾರಿಯ ಕ್ರೀಡಾಪಟುಗಳಾದ ಎಸ್.ಕಾವ್ಯ (20:25:30) ಹಾಗೂ ವಿ.ಸುದೀಕ್ಷಾ (20:27:14) ನಂತರದ ಸ್ಥಾನಗಳನ್ನು ಪಡೆದು ಗಮನ ಸೆಳೆದರು.</p>.<p>ನಗರದ ಕನಕದುರ್ಗಮ್ಮ ಗುಡಿ ಆವರಣದಲ್ಲಿ ಓಟಕ್ಕೆ, ಪ್ರಸಕ್ತ ಸಾಲಿನಲ್ಲಿ ಬ್ಯಾಂಕ್ ಕೃಷಿ ಸಾಧಕ ಪ್ರಶಸ್ತಿಗೆ ಆಯ್ಕೆ ಮಾಡಿರುವ ಅಜ್ಜಪ್ಪ ಕುಲುಗೋಡು ಮತ್ತು ಧರ್ಮರೆಡ್ಡಿ ಲಕ್ಕಣ್ಣನವರ್ ಹಸಿರು ನಿಶಾನೆ ತೋರಿದರು.</p>.<p>ಗುಡಿಯ ಆವರಣದಿಂದ ಶುರುವಾದ ಓಟ ಗಡಿಗಿ ಚೆನ್ನಪ್ಪ ವೃತ್ತ, ರೈಲು ನಿಲ್ದಾಣ ರಸ್ತೆ, ಎಚ್.ಆರ್.ಗವಿಯಪ್ಪ ವೃತ್ತ, ಅಂಬೇಡ್ಕರ್ ವೃತ್ತ, ಎಸ್ಪಿ ವೃತ್ತದ ಮೂಲಕ ಗುಡಿಯಲ್ಲಿ ಕೊನೆಗೊಂಡಿತು.</p>.<p>ಜಿಲ್ಲಾ ಅಥ್ಲೆಟಿಕ್ಸ್ ತರಬೇತುದಾರ ಕೆ.ಎನ್.ರಾಮಸ್ವಾಮಿ, ವಿದ್ಯಾನಗರ ಕ್ರೀಡಾ ವಸತಿ ಶಾಲೆಯ ಅಥ್ಲೆಟಿಕ್ಸ್ ತರಬೇತುದಾರ ಅಶೋಕ್ ಮಂಟೂರ್ ತೀರ್ಪುಗಾರರಾಗಿದ್ದರು.</p>.<p><strong>ನೀರಾ ವಿತರಣೆ: </strong>ಮಲೆನಾಡು ರೈತ ಉತ್ಪಾದಕ ಕಂಪನಿ ತಯಾರಿಸಿದ ನೀರಾ ಪಾನೀಯವನ್ನು ಸ್ಪರ್ಧಿಗಳಿಗೆ ವಿತರಿಸಿದ್ದು ವಿಶೇಷವಾಗಿತ್ತು.</p>.<p>ಬ್ಯಾಂಕಿನ ಅಧ್ಯಕ್ಷ ಮೋಹಿತ್ ಮಸ್ಕಿ, ಸಂಸ್ಥಾಪಕ ಅಧ್ಯಕ್ಷ ಮನೋಹರ್ ಮಸ್ಕಿ, ಕಾರ್ಯನಿರ್ವಾಹಕ ನಿರ್ದೇಶಕ ಪರಿಮಳಾಚಾರ್ಯ ಅಗ್ನಹೋತ್ರಿ, ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷ ಶಿವಾನಂದ ಕಳವೆ ಇದ್ದರು.</p>.<p><strong>ಪರಿಹಾರ ನಿಧಿಗೆ: </strong>ಓಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಕ್ರೀಡಾಪಟುಗಳು ಪಾವತಿಸಿದ ನೋಂದಣಿ ಶುಲ್ಕವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲಾಗುವುದು ಎಂದು ಬ್ಯಾಂಕ್ ಘೋಷಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong>ಸುಕೋ ಬ್ಯಾಂಕ್ ಬೆಳ್ಳಿ ಹಬ್ಬದ ಅಂಗವಾಗಿ ನಗರದಲ್ಲಿ ಶನಿವಾರ ಮುಂಜಾನೆ ನಡೆದ ‘ಸುಸ್ಥಿರ ಕೃಷಿ’ಗಾಗಿ ಸಾವಿರದ ಓಟ ಸ್ಪರ್ಧೆಯಲ್ಲಿ ಬೆಂಗಳೂರಿನ ಲಕ್ಷ್ಮಣ (14:23:17) ಮೊದಲ ಗುರಿ ಮುಟ್ಟಿ ₹ 25 ಸಾವಿರ ನಗದು ಬಹುಮಾನವನ್ನು ತನ್ನದಾಗಿಸಿಕೊಂಡರು.</p>.<p>ಅವರಿಗೆ ಸರಿಸಮನಾಗಿ ಪೈಪೋಟಿ ನೀಡಿದ ಗದಗ್ನ ಮಹಾಂತೇಶ್ ಬಿಂಗಿ (14:24:92) ಎರಡನೇ ಸ್ಥಾನ ಪಡೆದು ₹ 15 ಸಾವಿರ ನಗದು ಬಹುಮಾನವನ್ನು ತನ್ನದಾಗಿಸಿಕೊಂಡರು. ಬೆಂಗಳೂರಿನ ಭಾನುಪ್ರಕಾಶ್ (14:26:14) ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟು ₹ 10 ಸಾವಿರ ನಗದು ಬಹುಮಾನ ಪಡೆದರು.</p>.<p>ಬಹುಮಾನ ಗಳಿಸಲು ಆಗದಿದ್ದರೂ ಮಹಿಳೆಯರ ವಿಭಾಗದಲ್ಲಿ ದಾವಣಗೆರೆಯ ಎ.ಅಕ್ಷತಾ (17:37:18) ಮೊದಲು ಗುರಿ ಮುಟ್ಟಿದರೆ, ಬಳ್ಳಾರಿಯ ಕ್ರೀಡಾಪಟುಗಳಾದ ಎಸ್.ಕಾವ್ಯ (20:25:30) ಹಾಗೂ ವಿ.ಸುದೀಕ್ಷಾ (20:27:14) ನಂತರದ ಸ್ಥಾನಗಳನ್ನು ಪಡೆದು ಗಮನ ಸೆಳೆದರು.</p>.<p>ನಗರದ ಕನಕದುರ್ಗಮ್ಮ ಗುಡಿ ಆವರಣದಲ್ಲಿ ಓಟಕ್ಕೆ, ಪ್ರಸಕ್ತ ಸಾಲಿನಲ್ಲಿ ಬ್ಯಾಂಕ್ ಕೃಷಿ ಸಾಧಕ ಪ್ರಶಸ್ತಿಗೆ ಆಯ್ಕೆ ಮಾಡಿರುವ ಅಜ್ಜಪ್ಪ ಕುಲುಗೋಡು ಮತ್ತು ಧರ್ಮರೆಡ್ಡಿ ಲಕ್ಕಣ್ಣನವರ್ ಹಸಿರು ನಿಶಾನೆ ತೋರಿದರು.</p>.<p>ಗುಡಿಯ ಆವರಣದಿಂದ ಶುರುವಾದ ಓಟ ಗಡಿಗಿ ಚೆನ್ನಪ್ಪ ವೃತ್ತ, ರೈಲು ನಿಲ್ದಾಣ ರಸ್ತೆ, ಎಚ್.ಆರ್.ಗವಿಯಪ್ಪ ವೃತ್ತ, ಅಂಬೇಡ್ಕರ್ ವೃತ್ತ, ಎಸ್ಪಿ ವೃತ್ತದ ಮೂಲಕ ಗುಡಿಯಲ್ಲಿ ಕೊನೆಗೊಂಡಿತು.</p>.<p>ಜಿಲ್ಲಾ ಅಥ್ಲೆಟಿಕ್ಸ್ ತರಬೇತುದಾರ ಕೆ.ಎನ್.ರಾಮಸ್ವಾಮಿ, ವಿದ್ಯಾನಗರ ಕ್ರೀಡಾ ವಸತಿ ಶಾಲೆಯ ಅಥ್ಲೆಟಿಕ್ಸ್ ತರಬೇತುದಾರ ಅಶೋಕ್ ಮಂಟೂರ್ ತೀರ್ಪುಗಾರರಾಗಿದ್ದರು.</p>.<p><strong>ನೀರಾ ವಿತರಣೆ: </strong>ಮಲೆನಾಡು ರೈತ ಉತ್ಪಾದಕ ಕಂಪನಿ ತಯಾರಿಸಿದ ನೀರಾ ಪಾನೀಯವನ್ನು ಸ್ಪರ್ಧಿಗಳಿಗೆ ವಿತರಿಸಿದ್ದು ವಿಶೇಷವಾಗಿತ್ತು.</p>.<p>ಬ್ಯಾಂಕಿನ ಅಧ್ಯಕ್ಷ ಮೋಹಿತ್ ಮಸ್ಕಿ, ಸಂಸ್ಥಾಪಕ ಅಧ್ಯಕ್ಷ ಮನೋಹರ್ ಮಸ್ಕಿ, ಕಾರ್ಯನಿರ್ವಾಹಕ ನಿರ್ದೇಶಕ ಪರಿಮಳಾಚಾರ್ಯ ಅಗ್ನಹೋತ್ರಿ, ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷ ಶಿವಾನಂದ ಕಳವೆ ಇದ್ದರು.</p>.<p><strong>ಪರಿಹಾರ ನಿಧಿಗೆ: </strong>ಓಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಕ್ರೀಡಾಪಟುಗಳು ಪಾವತಿಸಿದ ನೋಂದಣಿ ಶುಲ್ಕವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲಾಗುವುದು ಎಂದು ಬ್ಯಾಂಕ್ ಘೋಷಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>