<p>ತಿಪಟೂರು: ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೃಷಿ ಇಲಾಖೆ, ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಪಂಚಾಯಿತಿ ಸಹಯೋಗದೊಂದಿಗೆ ಮಂಗಳವಾರ ರಸಗೊಬ್ಬರ ಮಾರಾಟಗಾರರಿಗೆ ರಸಗೊಬ್ಬರ ವಿತರಣೆ ತರಬೇತಿ ನಡೆಯಿತು.</p>.<p>ಸಹಾಯಕ ಕೃಷಿ ನಿರ್ದೇಶಕ ಪವನ್ ಮಾತನಾಡಿ, ರಸಗೊಬ್ಬರ ಮಾರಾಟ ಮಾಡುವಾಗ ರೈತರ ಆಧಾರ್ ಸಂಖ್ಯೆಯನ್ನು ಪಿಒಎಸ್ ಮಷಿನ್ನಲ್ಲಿ ಕಡ್ಡಾಯವಾಗಿ ನಮೂದಿಸಿ ವಿತರಿಸುತ್ತಿದ್ದರು. ಪ್ರಸಕ್ತ ಸಾಲಿನಲ್ಲಿ ಕೆ-ಕಿಸಾನ್ ತಂತ್ರಾಂಶದಲ್ಲಿ ರೈತರ ಆಧಾರ್ ಸಂಖ್ಯೆ ನಮೂದಿಸಿ ಎಫ್ಐಡಿ ಸಂಖ್ಯೆಯನ್ನು ಖಾತರಿಪಡಿಸಿಕೊಂಡು ವಿತರಣೆ ಮಾಡುವುದು ಕಡ್ಡಾಯವಾಗಿದೆ ಎಂದರು.</p>.<p>ತಹಶೀಲ್ದಾರ್ ಮೋಹನ್ಕುಮಾರ್ ಮಾತನಾಡಿ, ರೈತರ ಹೆಸರಿನಲ್ಲಿ ರಸಗೊಬ್ಬರ ಖರೀದಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯಲು ಹಾಗೂ ರೈತರು ನ್ಯಾಯೋಚಿತವಾಗಿ ರಸಗೊಬ್ಬರಗಳ ಬಳಕೆ ಮಾಡುವ ಉದ್ದೇಶದಿಂದ ಕೆ-ಕಿಸಾನ್ ತಂತ್ರಾಂಶದ ಮೂಲಕ ರಸಗೊಬ್ಬರ ವಿತರಣೆ ಮಾಡಲು ಕೃಷಿ ಇಲಾಖೆ ಕ್ರಮ ವಹಿಸಿದೆ. ಎಲ್ಲಾ ಮಾರಾಟಗಾರರು ಇದನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಎಂ.ಸುದರ್ಶನ್ ಮಾತನಾಡಿದರು.</p>.<p>ತಹಶೀಲ್ದಾರ್ ಮೋಹನ್ಕುಮಾರ್, ಸಹಾಯಕ ಕೃಷಿ ನಿರ್ದೇಶಕ ಪವನ್, ಕೃಷಿ ಇಲಾಖೆ ಅಧಿಕಾರಿಗಳು, 40ಕ್ಕೂ ಹೆಚ್ಚು ರಸಗೊಬ್ಬರ ಮಾರಾಟಗಾರರು, ಕೃಷಿ ಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-17-125914905</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿಪಟೂರು: ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೃಷಿ ಇಲಾಖೆ, ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಪಂಚಾಯಿತಿ ಸಹಯೋಗದೊಂದಿಗೆ ಮಂಗಳವಾರ ರಸಗೊಬ್ಬರ ಮಾರಾಟಗಾರರಿಗೆ ರಸಗೊಬ್ಬರ ವಿತರಣೆ ತರಬೇತಿ ನಡೆಯಿತು.</p>.<p>ಸಹಾಯಕ ಕೃಷಿ ನಿರ್ದೇಶಕ ಪವನ್ ಮಾತನಾಡಿ, ರಸಗೊಬ್ಬರ ಮಾರಾಟ ಮಾಡುವಾಗ ರೈತರ ಆಧಾರ್ ಸಂಖ್ಯೆಯನ್ನು ಪಿಒಎಸ್ ಮಷಿನ್ನಲ್ಲಿ ಕಡ್ಡಾಯವಾಗಿ ನಮೂದಿಸಿ ವಿತರಿಸುತ್ತಿದ್ದರು. ಪ್ರಸಕ್ತ ಸಾಲಿನಲ್ಲಿ ಕೆ-ಕಿಸಾನ್ ತಂತ್ರಾಂಶದಲ್ಲಿ ರೈತರ ಆಧಾರ್ ಸಂಖ್ಯೆ ನಮೂದಿಸಿ ಎಫ್ಐಡಿ ಸಂಖ್ಯೆಯನ್ನು ಖಾತರಿಪಡಿಸಿಕೊಂಡು ವಿತರಣೆ ಮಾಡುವುದು ಕಡ್ಡಾಯವಾಗಿದೆ ಎಂದರು.</p>.<p>ತಹಶೀಲ್ದಾರ್ ಮೋಹನ್ಕುಮಾರ್ ಮಾತನಾಡಿ, ರೈತರ ಹೆಸರಿನಲ್ಲಿ ರಸಗೊಬ್ಬರ ಖರೀದಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯಲು ಹಾಗೂ ರೈತರು ನ್ಯಾಯೋಚಿತವಾಗಿ ರಸಗೊಬ್ಬರಗಳ ಬಳಕೆ ಮಾಡುವ ಉದ್ದೇಶದಿಂದ ಕೆ-ಕಿಸಾನ್ ತಂತ್ರಾಂಶದ ಮೂಲಕ ರಸಗೊಬ್ಬರ ವಿತರಣೆ ಮಾಡಲು ಕೃಷಿ ಇಲಾಖೆ ಕ್ರಮ ವಹಿಸಿದೆ. ಎಲ್ಲಾ ಮಾರಾಟಗಾರರು ಇದನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಎಂ.ಸುದರ್ಶನ್ ಮಾತನಾಡಿದರು.</p>.<p>ತಹಶೀಲ್ದಾರ್ ಮೋಹನ್ಕುಮಾರ್, ಸಹಾಯಕ ಕೃಷಿ ನಿರ್ದೇಶಕ ಪವನ್, ಕೃಷಿ ಇಲಾಖೆ ಅಧಿಕಾರಿಗಳು, 40ಕ್ಕೂ ಹೆಚ್ಚು ರಸಗೊಬ್ಬರ ಮಾರಾಟಗಾರರು, ಕೃಷಿ ಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-17-125914905</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>