<p>ಯಾದಗಿರಿ: ‘ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ ವತಿಯಿಂದ ವಿಜಯಪುರ ನಗರದಲ್ಲಿ ಮೇ 8ರಂದು ‘4ನೇ ರಾಜ್ಯ ಮಟ್ಟದ ಬೃಹತ್ ರೈತ ಜಾಗೃತಿ ಸಮಾವೇಶ’ ಆಯೋಜಿಸಲಾಗಿದೆ’ ಎಂದು ಸೇನೆಯ ಉತ್ತರ ಕರ್ನಾಟಕ ಘಟಕದ ಅಧ್ಯಕ್ಷ ದೇವಿಂದ್ರಪ್ಪಗೌಡ ಪೊಲೀಸ್ ಪಾಟೀಲ ಹೇಳಿದರು.</p>.<p>ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮಾವೇಶಕ್ಕೆ ಜಿಲ್ಲೆಯಿಂದ 500ಕ್ಕೂ ಹೆಚ್ಚು ಜನ ರೈತರು ಭಾಗವಹಿಸುವ ನಿರೀಕ್ಷೆ ಇದೆ’ ಎಂದು ತಿಳಿಸಿದರು.</p>.<p>‘ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಳ ಮತ್ತು ಅದಕ್ಕೆ ಭೂಸ್ವಾಧೀನ ಪಡಿಸಿಕೊಂಡ ರೈತರಿಗೆ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸುವ, ರೈತರಿಗೆ ಹಗಲಲ್ಲಿ ತ್ರಿ–ಫೇಸ್, ರಾತ್ರಿವೇಳೆ ಸಿಂಗಲ್-ಫೇಸ್ ಉಚಿತ ವಿದ್ಯುತ್ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಬೇಕು’ ಎಂದು ಅವರು ಆಗ್ರಹಿಸಿದರು.</p>.<p>ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ ಭರತ, ಎಂ.ಡಿ.ಮೋಹಮ್ಮದ್, ಅಶೋಕ ಸಾಹುಕಾರ, ಮಲ್ಲಣ್ಣಗೌಡ ನಗನೂರು, ಕೃಷ್ಣ ಕಟಗಿ, ಭೀಮಶಪ್ಪಾ ಕರಕಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-30-1067796828</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ‘ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ ವತಿಯಿಂದ ವಿಜಯಪುರ ನಗರದಲ್ಲಿ ಮೇ 8ರಂದು ‘4ನೇ ರಾಜ್ಯ ಮಟ್ಟದ ಬೃಹತ್ ರೈತ ಜಾಗೃತಿ ಸಮಾವೇಶ’ ಆಯೋಜಿಸಲಾಗಿದೆ’ ಎಂದು ಸೇನೆಯ ಉತ್ತರ ಕರ್ನಾಟಕ ಘಟಕದ ಅಧ್ಯಕ್ಷ ದೇವಿಂದ್ರಪ್ಪಗೌಡ ಪೊಲೀಸ್ ಪಾಟೀಲ ಹೇಳಿದರು.</p>.<p>ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮಾವೇಶಕ್ಕೆ ಜಿಲ್ಲೆಯಿಂದ 500ಕ್ಕೂ ಹೆಚ್ಚು ಜನ ರೈತರು ಭಾಗವಹಿಸುವ ನಿರೀಕ್ಷೆ ಇದೆ’ ಎಂದು ತಿಳಿಸಿದರು.</p>.<p>‘ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಳ ಮತ್ತು ಅದಕ್ಕೆ ಭೂಸ್ವಾಧೀನ ಪಡಿಸಿಕೊಂಡ ರೈತರಿಗೆ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸುವ, ರೈತರಿಗೆ ಹಗಲಲ್ಲಿ ತ್ರಿ–ಫೇಸ್, ರಾತ್ರಿವೇಳೆ ಸಿಂಗಲ್-ಫೇಸ್ ಉಚಿತ ವಿದ್ಯುತ್ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಬೇಕು’ ಎಂದು ಅವರು ಆಗ್ರಹಿಸಿದರು.</p>.<p>ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ ಭರತ, ಎಂ.ಡಿ.ಮೋಹಮ್ಮದ್, ಅಶೋಕ ಸಾಹುಕಾರ, ಮಲ್ಲಣ್ಣಗೌಡ ನಗನೂರು, ಕೃಷ್ಣ ಕಟಗಿ, ಭೀಮಶಪ್ಪಾ ಕರಕಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-30-1067796828</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>