ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಗೋಡು ಅನಾರೋಗ್ಯದ ಸುಳ್ಳು ಸುದ್ದಿ: ಬಿಜೆಪಿ ಕಾರ್ಯಕರ್ತರ ವಿರುದ್ಧ ದೂರು

Last Updated 11 ಮೇ 2018, 20:34 IST
ಅಕ್ಷರ ಗಾತ್ರ

ಸಾಗರ: ‘ಕಾಗೋಡು ತಿಮ್ಮಪ್ಪ ಅಸ್ವಸ್ಥರಾಗಿದ್ದಾರೆ, ಅವರ ಆರೋಗ್ಯ ಸರಿಯಿಲ್ಲ’ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದು ಆರೋಪಿಸಿ ಬ್ಲಾಕ್ ಕಾಂಗ್ರೆಸ್‌ ಉಪಾಧ್ಯಕ್ಷ ತಾರಾಮೂರ್ತಿ ಹಾಗೂ ಪ್ರಧಾನ ಕಾರ್ಯದರ್ಶಿ ಮಹಾಬಲ ಕೌತಿ ಶುಕ್ರವಾರ ಬಿಜೆಪಿ ಕಾರ್ಯಕರ್ತರ ವಿರುದ್ಧ ನಗರ ಠಾಣೆ ಪೊಲೀಸರಿಗೆ ದೂರು ನೀಡಿದರು.

ಕಳೆದ ತಿಂಗಳು ತಿಮ್ಮಪ್ಪ ಅವರು ಶಿವಮೊಗ್ಗದ ಆಸ್ಪತ್ರೆಗೆ ದಾಖಲಾಗಿದ್ದ ದೃಶ್ಯವನ್ನು ವಾಹಿನಿಯೊಂದು ಬಿತ್ತರಿಸಿತ್ತು. ಇದೇ ಚಿತ್ರವನ್ನು ಬಳಸಿಕೊಂಡು, ಬಿಜೆಪಿ ಕಾರ್ಯಕರ್ತರಾದ ಗಣೇಶ್ ಗಟ್ಟಿ ಹಾಗೂ ಚಂದ್ರಶೇಖರ್ ಎಂಬುವವರು ಫೇಸ್‌ಬುಕ್‌ ಹಾಗೂ ‘ಸಾಗರ ಸುತ್ತಮುತ್ತ’ ಎಂಬ ವಾಟ್ಸ್‌ ಆ್ಯಪ್‌ ಗ್ರೂಪ್‌ನಲ್ಲಿ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಚುನಾವಣಾ ಸಂದರ್ಭದಲ್ಲಿ ಮತದಾರರ ಹಾದಿ ತಪ್ಪಿಸಲು ಇಂತಹ ಕೃತ್ಯ ನಡೆಸಲಾಗಿದ್ದು, ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೋರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT