ADVERTISEMENT

ಸಾಹಿತ್ಯ ಮತ್ತು ಕಾಲ: ಉಪನ್ಯಾಸ

​ಪ್ರಜಾವಾಣಿ ವಾರ್ತೆ
Published 11 ಜನವರಿ 2019, 19:46 IST
Last Updated 11 ಜನವರಿ 2019, 19:46 IST
   

ಕೆಪಿಟಿಸಿಎಲ್ ಲೆಕ್ಕಾಧಿಕಾರಿಗಳ ಸಂಘ ಶನಿವಾರ ‘ಸಾಹಿತ್ಯ ಮತ್ತು ಕಾಲ; ಸಂಬಂಧಗಳು ಮತ್ತು ವೃದ್ಧಾಪ್ಯ’ ಕಾರ್ಯಕ್ರಮ ಆಯೋಜಿಸಿದೆ.

ಅಂದು ಬೆಳಿಗ್ಗೆ 10.50 ಗಂಟೆಗೆ ಖ್ಯಾತ ವಿಮರ್ಶಕ ಡಾ.ಎಚ್.ಎಸ್. ರಾಘವೇಂದ್ರ ರಾವ್ ಅವರು ‘ಸಾಹಿತ್ಯ ಮತ್ತು ಕಾಲ’ ಕುರಿತು ಮಾತನಾಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ‘ಸಾಮ’ ಸಂಗೀತ ಸಂಸ್ಥೆಯ ನಿರ್ದೇಶಕ ಮನೋಜ ವಸಿಷ್ಠ ಹಾಗೂ ಆಕಾಶವಾಣಿ ಬಿ ಹೈಗ್ರೇಡ್ ಕಲಾವಿದೆ ಅರುಂಧತಿ ಮನೋಜ್ ವಸಿಷ್ಠ ಅವರಿಂದ ದ್ವಂದ್ವ ಶಾಸ್ತ್ರೀಯ ಮತ್ತು ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಮಧ್ಯಾಹ್ನ 2.30ಗಂಟೆಗೆ ಸಂಶೋಧಕ ಡಾ.ಆನಂದರಾಮ ಉಪಾಧ್ಯ ಅವರು ‘ಜೀವನ ಮೌಲ್ಯಗಳು ಮತ್ತು ಆಧ್ಯಾತ್ಮಿಕ ವಿಚಾರಗಳು’ ಕುರಿತು ಉಪನ್ಯಾಸ ನೀಡುವರು. ಮಧ್ಯಾಹ್ನ 3.30 ಗಂಟೆಗೆ ಆಪ್ತ ಸಲಹೆಗಾರ್ತಿ ಶಾಂತಾ ನಾಗರಾಜ್ ‘ಸಂಬಂಧಗಳು ಮತ್ತು ವೃದ್ಧಾಪ್ಯ’ ಕುರಿತು ಆರೋಗ್ಯ ಜಾಗೃತಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ADVERTISEMENT

ಸ್ಥಳ: ಆನಂದರಾವ್ ವೃತ್ತದ ಹತ್ತಿರದ ಕೆಪಿಟಿಸಿಎಲ್ ಲೆಕ್ಕಾಧಿಕಾರಿಗಳ ಸಂಘದ ಬೆಳ್ಳಿ ಭವನ.

ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದೆ. ಮಾಹಿತಿಗೆ ವಿ.ಜಿ. ಪಂಡಿತ್ 99865 96691.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.