ADVERTISEMENT

ಪಂಡಿತ್ ವೆಂಕಟೇಶಕುಮಾರಗೆ ‘ರಾಜಗುರು’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2021, 18:07 IST
Last Updated 29 ಸೆಪ್ಟೆಂಬರ್ 2021, 18:07 IST
ಪಂಡಿತ್ ಎಂ. ವೆಂಕಟೇಶ ಕುಮಾರ
ಪಂಡಿತ್ ಎಂ. ವೆಂಕಟೇಶ ಕುಮಾರ   

ಧಾರವಾಡ: ಪಂ.ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ನೀಡುವ ‘ರಾಜಗುರು’ ಪ್ರಶಸ್ತಿಯು ಹಿಂದೂಸ್ತಾನಿ ಗಾಯಕ ಪಂಡಿತ್ ಎಂ.ವೆಂಕಟೇಶಕುಮಾರ ಅವರಿಗೆ ಲಭಿಸಿದೆ.

ರಾಜಗುರು ಅವರ 101ನೇ ಜನ್ಮದಿನ ಸಂದರ್ಭದಲ್ಲಿ ನೀಡಲಾಗುತ್ತಿರುವ ಈ ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಇವರೊಂದಿಗೆ ಯುವ ಪ್ರಶಸ್ತಿಯು ವಿಜಯಪುರದ ಯುವ ಗಾಯಕಿ ಕೃತಿಕಾ ಜಂಗಿನಮಠ ಹಾಗೂ ಕೋಲ್ಕತ್ತಾದ ತಬಲಾ ವಾದಕಿ ರಿಂಪಾ ಶಿವಾ ಅವರಿಗೆ ಲಭಿಸಿದೆ. ಈ ಪ್ರಶಸ್ತಿಯು ತಲಾ ₹25 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು ಅ.4ರಂದು ನಗರದ ಸೃಜನಾ ರಂಗಮಂದಿರದಲ್ಲಿ ನಡೆಯಲಿದೆ ಎಂದು ಟ್ರಸ್ಟ್ ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.