ಲಖನೌ: ದೇಶದ ಬಡವರು, ರೈತರು ಮತ್ತು ದುಡಿಯುವ ವರ್ಗ ಸೇರಿದಂತೆ ಕೋಟ್ಯಂತರ ಜನರು ಸರ್ಕಾರದ ಆಕರ್ಷಕ ಮತ್ತು ಟೊಳ್ಳು ಭರವಸೆಯಿಂದ ಬೇಸತ್ತು ಹೋಗಿದ್ದಾರೆ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯವತಿ ಅವರು ಹೇಳಿದರು.
ಸಂಸತ್ತಿನಲ್ಲಿ ಸೋಮವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಅವರು,‘ ಸರ್ಕಾರ ಮೊದಲ ಘೋಷಿತ ನೀತಿಗಳನ್ನು ಜಾರಿಗೆಗೊಳಿಸಿದರೆ ಉತ್ತಮವಾಗಿರುತ್ತದೆ. ಇಂದಿನ ಬಜೆಟ್ ಯಾವುದೇ ರೀತಿಯಲ್ಲಿ ಬಡತನ, ನಿರುದ್ಯೋಗ ಮತ್ತು ಹಣದುಬ್ಬರದಂತಹ ಸಮಸ್ಯೆಗಳನ್ನು ಬಗೆಹರಿಸುವಂತೆ ಕಾಣುತ್ತಿದೆಯೇ?’ ಎಂದು ಅವರು ಪ್ರಶ್ನಿಸಿದ್ದಾರೆ.
‘ದೇಶದ ಕೋಟ್ಯಂತರ ಜನರು ಆಕರ್ಷಕ ಆಶ್ವಾಸನೆ ಮತ್ತು ಟೊಳ್ಳು ಭರವಸೆಗಳಿಂದ ಬೇಸತ್ತು ಹೋಗಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರನ್ನು ಪೀಡಿಸುತ್ತಿದೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇವುಗಳನ್ನೂ ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.