ನವದೆಹಲಿ: ಕೇಂದ್ರ ಸರ್ಕಾರವು ಉದ್ದು ಮತ್ತು ತೊಗರಿಯನ್ನು ಸುಂಕ ರಹಿತವಾಗಿ ಆಮದು ಮಾಡಿಕೊಳ್ಳುವ ಅವಧಿಯನ್ನು ಡಿಸೆಂಬರ್ 31ರವರೆಗೆ ವಿಸ್ತರಣೆ ಮಾಡಿದೆ. ಕೇಂದ್ರ ವಾಣಿಜ್ಯ ಸಚಿವಾಲಯವು ಈ ಕುರಿತು ಅಧಿಸೂಚನೆ ಹೊರಡಿಸಿದೆ.
ಈ ವರ್ಷದ ಮೇ ತಿಂಗಳಿನಲ್ಲಿ ಸರ್ಕಾರವು ಉದ್ದು ಮತ್ತು ತೊಗರಿಯ ಆಮದನ್ನು ನಿರ್ಬಂಧಿತ ವರ್ಗದಿಂದ ‘ಉಚಿತ’ ವರ್ಗಕ್ಕೆ ಬದಲಾಯಿಸಿತ್ತು. ನಿರ್ಬಂಧಿತ ವರ್ಗದಲ್ಲಿ ಆಮದು ಮಾಡಿಕೊಳ್ಳಲು ಅನುಮತಿ ಅಥವಾ ಪರವಾನಗಿ ಪಡೆದುಕೊಳ್ಳಬೇಕಾಗುತ್ತದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.