ADVERTISEMENT

ಸರ್ಕಲ್ ಪಾಲಿಟಿಕ್ಸ್: ಜಮಖಂಡಿಯಲ್ಲಿ ನಿಷೇಧಾಜ್ಞೆ ಜಾರಿ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2023, 4:15 IST
Last Updated 18 ಮಾರ್ಚ್ 2023, 4:15 IST
   

ಜಮಖಂಡಿ: ನಗರದ‌ಲ್ಲಿ ಅನಧಿಕೃತವಾಗಿ ವೃತ್ತಗಳನ್ನು ನಿರ್ಮಾಣ ಮಾಡಿರುವುದರಿಂದ ಶಾಂತಿ ಕಾಪಾಡುವ ದೃಷ್ಡಿಯಿಂದ ಶನಿವಾರ ಬೆಳಿಗ್ಗೆಯಿಂದ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಗರದಲ್ಲಿ ಜನರು ಗುಂಪು, ಗುಂಪಾಗಿ ಸೇರುವಂತಿಲ್ಲ. ಶವ ಸಂಸ್ಕಾರಕ್ಕೆ ಅನ್ವಯಿಸುವುದಿಲ್ಲ ಎಂದು ತಹಶೀಲ್ದಾರ್ ಸದಾಶಿವ ಮುಕ್ಕೋಜಿ ಆದೇಶದಲ್ಲಿ ತಿಳಿಸಿದ್ದಾರೆ.

ಶಾಸಕ ಆನಂದ ನ್ಯಾಮಗೌಡರ ನೇತ್ರತ್ವದಲ್ಲಿ ಮೌಲಾನಾ ಅಬುಲ್ ಕಲಾಂ ಆಜಾದ್ ವೃತ್ತ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿತ್ತು. ವೃತ್ತ ನಿರ್ಮಾಣ ಮಾಡಲಾಯಿತು. ಇದನ್ನು ಖಂಡಿಸಿ ಬಿಜೆಪಿ ಮುಖಂಡರು ಆರು ವೃತ್ತಗಳನ್ನು ನಿರ್ಮಾಣ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.