ADVERTISEMENT

ಅಪಘಾತ: ಪತ್ನಿ ಸಾವು, ಪತಿಗೆ ಗಾಯ

ಸಿನಿಮಾ ನೋಡಿ ಮನೆಗೆ ಹೋಗುವಾಗ ಅವಘಡ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2022, 19:31 IST
Last Updated 21 ಆಗಸ್ಟ್ 2022, 19:31 IST
ಶ್ವೇತಾ
ಶ್ವೇತಾ   

ಬೆಂಗಳೂರು: ಬಾಣಸವಾಡಿ ಬಳಿಯ ಕಲ್ಯಾಣನಗರದಲ್ಲಿ ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು, ಶ್ವೇತಾ (28) ಮೃತಪಟ್ಟಿದ್ದಾರೆ. ಅವರ ಪತಿ ಆನಂದ್ (30) ತೀವ್ರ ಗಾಯಗೊಂಡಿದ್ದಾರೆ.

‘ಖಾಸಗಿ ಕಂಪನಿ ಉದ್ಯೋಗಿ ಆನಂದ್ ಹಾಗೂ ಶ್ವೇತಾ, ಕೆಲ ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಶನಿವಾರ ರಜೆ ಇದ್ದಿದ್ದರಿಂದ ಇಬ್ಬರೂ ಶಾಪಿಂಗ್‌ಗೆ ಹೋಗಿ ರಾತ್ರಿ ಸಿನಿಮಾ ನೋಡಿಕೊಂಡು ವಾಪಸು ಮನೆಗೆ ಹೋಗುವಾಗ ಅವಘಡ ಸಂಭವಿಸಿದೆ’ ಎಂದು ಬಾಣಸವಾಡಿ ಸಂಚಾರ ಪೊಲೀಸರು ಹೇಳಿದರು.

‘ಆನಂದ್ ಅವರು ದ್ವಿಚಕ್ರ ವಾಹನ ಚಲಾಯಿಸುತ್ತಿದ್ದರು. ಹಿಂಬದಿಯಲ್ಲಿ ಶ್ವೇತಾ ಕುಳಿತಿದ್ದರು. ಕಲ್ಯಾಣನಗರದ ಜಂಕ್ಷನ್‌ನಲ್ಲಿ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿತ್ತು. ರಸ್ತೆಯಲ್ಲಿ ಬಿದ್ದ ಶ್ವೇತಾ ತಲೆಗೆ ತೀವ್ರ ‍ಪೆಟ್ಟು ಬಿದ್ದಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದೂ ತಿಳಿಸಿದರು.

ADVERTISEMENT

‘ಗಾಯಗೊಂಡಿರುವ ಆನಂದ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಅವರ ಆರೋಗ್ಯ ಸ್ಥಿತಿಯೂ ಚಿಂತಾಜನಕವಾಗಿದೆ. ತಮಿಳುನಾಡು ನೋಂದಣಿ ಸಂಖ್ಯೆಯ (ಟಿಎನ್ 29 ಬಿಕೆ 6211) ಲಾರಿಯಿಂದ ಅಪಘಾತ ಸಂಭವಿಸಿರುವುದು ಗೊತ್ತಾಗಿದೆ. ಪರಾರಿಯಾಗಿರುವ ಚಾಲಕನನ್ನು ಪತ್ತೆ ಮಾಡಲಾಗುತ್ತಿದೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.