ADVERTISEMENT

ಬೆಳಗಾವಿ: ₹ 7 ಕೋಟಿ ಮೌಲ್ಯದ ಅಡಿಕೆ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2021, 15:33 IST
Last Updated 14 ಸೆಪ್ಟೆಂಬರ್ 2021, 15:33 IST
ಜಿಎಸ್‌ಟಿ ಪಾವತಿಸದೆ ಅಡಿಕೆಯನ್ನು ಸಾಗಿಸುತ್ತಿದ್ದ ವಾಹನಗಳು ಹಾಗೂ ಚಾಲಕರನ್ನು ಬೆಳವಾವಿಯ ಜಿಎಸ್‌ಟಿ ಅಧಿಕಾರಿಗಳು ಮಂಗಳವಾರ ವಶಕ್ಕೆ ಪಡೆದಿದ್ದಾರೆ
ಜಿಎಸ್‌ಟಿ ಪಾವತಿಸದೆ ಅಡಿಕೆಯನ್ನು ಸಾಗಿಸುತ್ತಿದ್ದ ವಾಹನಗಳು ಹಾಗೂ ಚಾಲಕರನ್ನು ಬೆಳವಾವಿಯ ಜಿಎಸ್‌ಟಿ ಅಧಿಕಾರಿಗಳು ಮಂಗಳವಾರ ವಶಕ್ಕೆ ಪಡೆದಿದ್ದಾರೆ   

ಬೆಳಗಾವಿ: ಜಿಎಸ್‌ಟಿ ಪಾವತಿಸಿದ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಅಂದಾಜು ₹ 7 ಕೋಟಿ ಮೌಲ್ಯದ ಅಡಿಕೆಯನ್ನು 7 ಲಾರಿಗಳ ಸಮೇತ ವಶ‍ಪಡಿಸಿಕೊಳ್ಳಲಾಗಿದೆ.

ಡಿಜಿಜಿಐ (ಜಿಎಸ್‌ಟಿ ಗುಪ್ತಚರ ನಿರ್ದೇಶನಾಲಯ) ಮಂಗಳೂರು ವಲಯ ಘಟಕದಿಂದ ದೊರೆತ ಖಚಿತ ಮಾಹಿತಿ ಮೇರೆಗೆ ಇಲ್ಲಿನ ಕೇಂದ್ರ ಜಿಎಸ್‌ಟಿ ವಿಭಾಗದ ಅಧಿಕಾರಿಗಳ ತಂಡವು ವಾಹನಗಳನ್ನು ಹುಬ್ಬಳ್ಳಿ–ನವಲಗುಂದ ರಸ್ತೆಯಲ್ಲಿ ತಡೆದು ಪರಿಶೀಲನೆ ನಡೆಸಿದೆ. ಸಮರ್ಪಕ ಜಿಎಸ್‌ಟಿ ದಾಖಲೆಗಳಿಲ್ಲದೆ ದೊಡ್ಡ ಪ್ರಮಾಣದಲ್ಲಿ ಅಡಿಕೆಯನ್ನು ಸಾಗಿಸುತ್ತಿದ್ದುದ್ದನ್ನು ಪತ್ತೆ ಹಚ್ಚಲಾಗಿದೆ.

‘ಅಡಿಕೆ ಸಾಗಣೆಯಲ್ಲಿ ತೆರಿಗೆ ವಂಚಿಸುವವರ ಮೇಲೆ ನಿಗಾ ವಹಿಸಲಾಗಿದೆ. ಸರ್ಕಾರಕ್ಕೆ ಆಗುವ ನಷ್ಟ ತಪ್ಪಿಸುವ ನಿಟ್ಟಿನಲ್ಲಿ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಶಿವಮೊಗ್ಗ ಸಮೀಪದಲ್ಲಿ ಖರೀದಿಸಿದ ಅಡಿಕೆಯನ್ನು ದೆಹಲಿ ಹಾಗೂ ಅಹಮದಾಬಾದ್‌ಗೆ ಸಾಗಿಸಲಾಗುತ್ತಿತ್ತು ಎನ್ನುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆ ವಾಹನಗಳು ಮತ್ತು ಸರಕನ್ನು ಡಿಜಿಜಿಐ ಅಧಿಕಾರಿಗಳ ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರಿದಿದೆ’ ಎಂದು ಜಿಎಸ್‌ಟಿ ಬೆಳಗಾವಿ ಕಚೇರಿಯ ಸಹಾಯಕ ಆಯುಕ್ತ ಅಜಿಂಕ್ಯ ಹರಿ ಕಾಟ್ಕರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.