ADVERTISEMENT

ಹರ್ಷಿಕಾ, ಭುವನ್‌ರಿಂದ ದಿನಸಿ ಕಿಟ್ ವಿತರಣೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2021, 13:09 IST
Last Updated 9 ಜೂನ್ 2021, 13:09 IST
ಚಿತ್ರ ನಟರಾದ ಭುವನ್ ಪೊನ್ನಣ್ಣ ಹಾಗೂ ಹರ್ಷಿಕಾ ಪೂಣಚ್ಚ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಸವಸುದ್ದಿ ಗ್ರಾಮದಲ್ಲಿ ಕೋವಿಡ್‌ನಿಂದ ಸಂಕಷ್ಟಕ್ಕೆ ಒಳಗಾದವರಿಗೆ ದಿನಸಿ ಕಿಟ್‌ ವಿತರಿಸಿದರು
ಚಿತ್ರ ನಟರಾದ ಭುವನ್ ಪೊನ್ನಣ್ಣ ಹಾಗೂ ಹರ್ಷಿಕಾ ಪೂಣಚ್ಚ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಸವಸುದ್ದಿ ಗ್ರಾಮದಲ್ಲಿ ಕೋವಿಡ್‌ನಿಂದ ಸಂಕಷ್ಟಕ್ಕೆ ಒಳಗಾದವರಿಗೆ ದಿನಸಿ ಕಿಟ್‌ ವಿತರಿಸಿದರು   

ಬೆಳಗಾವಿ: ಭುವನಂ ಸಂಸ್ಥೆಯ ರಾಯಬಾರಿಗಳಾದ ಚಿತ್ರ ನಟ ಭುವನ್ ಪೊನ್ನಣ್ಣ ಹಾಗೂ ನಟಿ ಹರ್ಷಿಕಾ ಪೂಣಚ್ಚ ಅವರು ಜಿಲ್ಲೆಯ ರಾಯಬಾಗ ತಾಲ್ಲೂಕಿನ ಸವಸುದ್ದಿ ಗ್ರಾಮದಲ್ಲಿ ಕೋವಿಡ್ ಜಾಗೃತಿಗಾಗಿ‘ಉಷಾರ್’ ಅಭಿಯಾನ ನಡೆಸಿದರು.

ಆ ಗ್ರಾಮದಲ್ಲಿ ತಿಂಗಳಲ್ಲಿ ಹಲವು ಮಂದಿ ಸಾವಿಗೀಡಾಗಿದ್ದನ್ನು ತಿಳಿದು, ಜನರನ್ನು ಭೇಟಿಯಾಗಿ ಅವರ ತೊಂದರೆಗಳನ್ನು ಆಲಿಸಿದರು. ಕೊರೊನಾಪೀಡಿತ 50 ಕುಟುಂಬಗಳ ಮನೆಗಳಿಗೆ ತೆರಳಿ ತಿಂಗಳಿಗೆ ಆಗುವಷ್ಟು ಅಗತ್ಯ ವಸ್ತುಗಳು, ದಿನಸಿ, ಔಷಧಿ ಮತ್ತು ಮಾಸ್ಕ್‌ಗಳುಳ್ಳ ಕಿಟ್‌ಗಳನ್ನು ವಿತರಿಸಿದರು.

ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.