ADVERTISEMENT

ಬೆಳಗಾವಿ: ವೇತನಕ್ಕೆ ಆಗ್ರಹಿಸಿ ನೌಕರರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2021, 15:00 IST
Last Updated 15 ಸೆಪ್ಟೆಂಬರ್ 2021, 15:00 IST
ಬೆಳಗಾವಿಯಲ್ಲಿ ನೀರು ಪೂರೈಕೆ ನೌಕರರು ವೇತನಕ್ಕೆ ಆಗ್ರಹಿಸಿ ಡಾ.ಬಿ.ಆರ್. ಅಂಬೇಡ್ಕರ್‌ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು
ಬೆಳಗಾವಿಯಲ್ಲಿ ನೀರು ಪೂರೈಕೆ ನೌಕರರು ವೇತನಕ್ಕೆ ಆಗ್ರಹಿಸಿ ಡಾ.ಬಿ.ಆರ್. ಅಂಬೇಡ್ಕರ್‌ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು   

ಬೆಳಗಾವಿ: ‘ನಗರದಲ್ಲಿ ನೀರು ಸರಬರಾಜು ಹೊಣೆಯನ್ನು ಖಾಸಗಿ ಕಂಪನಿಗೆ ಹಸ್ತಾಂತರಿಸಿದ ನಂತರ ನಮಗೆ 15 ದಿನಗಳಿಂದ ವೇತನ ಬಂದಿಲ್ಲ. ಇದರಿಂದ ಜೀವನ ನಿರ್ವಹಣೆಗೆ ತೊಂದರೆಯಾಗಿದೆ’ ಎಂದು ನೀರು ಪೂರೈಕೆ ನೌಕರರು ಇಲ್ಲಿನ ಡಾ.ಬಿ.ಆರ್. ಅಂಬೇಡ್ಕರ್‌ ಉದ್ಯಾನದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

‘ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ವ್ಯಾಪ್ತಿಯಲ್ಲಿ ಕೆಲಸ ಮಾಡುವಾಗ ವೇತನ ಸಕಾಲಕ್ಕೆ ಬರುತ್ತಿತ್ತು. ಈಗ ತೊಂದರೆಯಾಗಿದೆ. ಕಂಪನಿಯಿಂದ ನೇಮಕ ಮಾಡಿಕೊಂಡವರಿಗೆ ಸರಿಯಾಗಿ ವೇತನ ಕೊಡಲಾಗುತ್ತಿದೆ. ಆದರೆ, ನಮ್ಮನ್ನು ಕಡೆಗಣಿಸಲಾಗುತ್ತಿದೆ’ ಎಂದು ದೂರಿದರು.

‘ವೇತನ ಕೇಳಿದರೆ, ಆ ಕಂಪನಿಯವರು ಹಾರಿಕೆ ಉತ್ತರ ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.

ADVERTISEMENT

‘ನಮ್ಮ ಕೆಲಸ ಕಾಯಂಗೊಳಿಸಬೇಕು. ಸೇವಾ ಭದ್ರತೆ ಒದಗಿಸಬೇಕು. ಹಿಂದಿನಂತೆಯೇ ಸಕಾಲಕ್ಕೆ ವೇತನ ದೊರೆಯುವಂತಾಗಬೇಕು. ಇಲ್ಲವಾದಲ್ಲಿ ನಮ್ಮನ್ನು ನಗರಪಾಲಿಕೆ ಅಥವಾ ಜಲಮಂಡಳಿ ಸಿಬ್ಬಂದಿ ಎಂದೇ ಪರಿಗಣಿಸಿ ತಿಂಗಳ 5ನೇ ತಾರೀಖಿನೊಳಗೆ ವೇತನ ನೀಡಬೇಕು’ ಎಂದು ಒತ್ತಾಯಿಸಿದರು.

‘ವೇತನ ಸಿಗುವವರೆಗೂ ನೀರು ಪೂರೈಕೆ ಕೆಲಸದಿಂದ ದೂರ ಉಳಿಯಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ನೌಕರರ ಆರೋಪದ ಬಗ್ಗೆ ಪ್ರತಿಕ್ರಿಯೆಗೆ ಕಂಪನಿಯ ಪ್ರತಿನಿಧಿಗಳು ಲಭ್ಯವಾಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.