ಬೆಂಗಳೂರು: ಸೆ.27ರಂದು ಭಾರತ ಬಂದ್ಗೆ ನೀಡಿರುವ ಕರೆಗೆ ಬೆಂಬಲ ನೀಡುವುದಿಲ್ಲ ಎಂದು ಬೃಹತ್ ಬೆಂಗಳೂರು ಹೋಟೆಲುಗಳ ಸಂಘ ತಿಳಿಸಿದೆ.
‘ರೈತರು ಬೆಳೆಯುವ ತರಕಾರಿ, ಹಣ್ಣು, ದವಸವನ್ನು ಹೋಟೆಲ್ ಉದ್ಯಮ ಖರೀದಿಸಿ ರೈತರನ್ನು ಪ್ರೋತ್ಸಾಹಿಸುತ್ತಿದೆ. ಕೋವಿಡ್ ಲಾಕ್ಡೌನ್ನಿಂದ ಈ ಉದ್ಯಮ ಮೊದಲೇ ಸಂಕಷ್ಟದಲ್ಲಿದ್ದು, ಬಂದ್ಗೆ ಸಹಕಾರ ನೀಡುವುದಿಲ್ಲ’ ಎಂದು ಸಂಘದ ಅಧ್ಯಕ್ಷ ಪಿ.ಸಿ. ರಾವ್ ಮತ್ತು ಪ್ರಧಾನ ಕಾರ್ಯದರ್ಶಿ ವೀರೇಂದ್ರ ಎನ್. ಕಾಮತ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.