ADVERTISEMENT

ಮನೆಗೆ ನುಗ್ಗಿ ಸರ ಕಳವು: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2021, 19:24 IST
Last Updated 18 ಸೆಪ್ಟೆಂಬರ್ 2021, 19:24 IST
ಆರೋಪಿಗಳಿಂದ ಜಪ್ತಿ ಮಾಡಲಾಗಿರುವ ಚಿನ್ನಾಭರಣ
ಆರೋಪಿಗಳಿಂದ ಜಪ್ತಿ ಮಾಡಲಾಗಿರುವ ಚಿನ್ನಾಭರಣ   

ಬೆಂಗಳೂರು: ಬಸವೇಶ್ವರನಗರ ಠಾಣೆ ವ್ಯಾಪ್ತಿಯ ಮನೆಯೊಂದಕ್ಕೆ ನುಗ್ಗಿ ಚಿನ್ನದ ಸರ ಕಳವು ಮಾಡಿದ್ದ ಆರೋಪದಡಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

‘ಕೋಲಾರದ ಮಂಜುನಾಥ್ (23) ಹಾಗೂ ಪ್ರಶಾಂತ್ (27) ಬಂಧಿತರು. ಅವರಿಂದ ₹ 8 ಲಕ್ಷ ಮೌಲ್ಯದ 200 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಬಸವೇಶ್ವರನಗರದ ನಿವಾಸಿಯೊಬ್ಬರು ಸೆ. 18ರಂದು ಬೆಳಿಗ್ಗೆ ವಾಯುವಿಹಾರಕ್ಕೆ ಹೋಗಿದ್ದರು. ಅದೇ ಸಂದರ್ಭದಲ್ಲೇ ಮನೆಗೆ ನುಗ್ಗಿದ್ದ ಆರೋಪಿಗಳು, ಚಿನ್ನದ ಸರ ಕದ್ದುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿತ್ತು’ ಎಂದೂ ತಿಳಿಸಿದರು.

ADVERTISEMENT

‘ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರನ್ನು ಹಿಂಬಾಲಿಸಿ ಸರ ಕಳವು ಮಾಡುತ್ತಿದ್ದ ಆರೋಪಿಗಳು, ಕೆಲವೆಡೆ ಮನೆಗಳಲ್ಲೂ ಕಳವು ಮಾಡಿದ್ದರು. ಇವರಿಬ್ಬರ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾಗಿವೆ’ ಎಂದೂ ಪೊಲೀಸರು ಹೇಳಿದರು.

‘ಅನುಗೊಂಡನಹಳ್ಳಿ, ಸರ್ಜಾಪುರ ಹಾಗೂ ಶ್ರೀನಿವಾಸಪುರ ಠಾಣೆ ವ್ಯಾಪ್ತಿಯಲ್ಲೂ ಆರೋಪಿಗಳು ಅಪರಾಧ ಕೃತ್ಯ ಎಸಗಿರುವುದು ಗೊತ್ತಾಗಿದೆ’ ಎಂದೂ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.