ADVERTISEMENT

ಕೆಎಸ್‌ಆರ್‌ಟಿಸಿಗೆ ಐದು ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2021, 3:11 IST
Last Updated 22 ಸೆಪ್ಟೆಂಬರ್ 2021, 3:11 IST

ಬೆಂಗಳೂರು: ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ ನೀಡುವ ‘ಪಿಆರ್‌ಸಿಐ ಎಕ್ಸಲೆನ್ಸ್’ ‍ಪ್ರಶಸ್ತಿ ಕೆಎಸ್ಆರ್‌ಟಿಸಿಗೆ ಐದು ವರ್ಗಗಳಲ್ಲಿ ಲಭಿಸಿದೆ.

ಸಾರ್ವಜನಿಕ ವಲಯದಲ್ಲಿ ಕೋವಿಡ್ ನಿರ್ವಹಣೆಗೆ ಬೆಳ್ಳಿ ಪದಕ, ಅತ್ಯುತ್ತಮ ಸಾರ್ವಜನಿಕ ಉದ್ದಿಮೆ ಸಾಮಾಜಿಕ ಹೊಣೆಗಾರಿಕೆ ಅಡಿಯಲ್ಲಿನ ಉಪಕ್ರಮಗಳ ಅನುಷ್ಠಾನಕ್ಕೆ ಕಂಚಿನ ಪದಕ, ಆರೋಗ್ಯ ರಕ್ಷಣೆ ಸಂವಹನ ಸಾಕ್ಷ್ಯಚಿತ್ರಗಳಿಗೆ ಕಂಚಿನ ಪದಕ, ಆಂತರಿಕ ನಿಯತಕಾಲಿಕೆ(ಪ್ರಾದೇಶಿಕ) ‘ಸಾರಿಗೆ ಸಂಪದ’ಕ್ಕೆ ಚಿನ್ನದ ಪದಕ, ಕೋವಿಡ್ ಸಮಯದಲ್ಲಿ ಗ್ರಾಹಕ ಸ್ನೇಹಿ ಉಪಕ್ರಮಕ್ಕೆ ಚಿನ್ನದ ಪದಕ ಲಭಿಸಿದೆ.

ಗೋವಾದಲ್ಲಿ ಇದೇ 18ರಂದು ನಡೆದ 15ನೇ ವಿಶ್ವ ಸಾರ್ವಜನಿಕ ಸಂಪರ್ಕ ಮಂಡಳಿಯ ಸಮ್ಮೇಳನದಲ್ಲಿ ಗೋವಾದ ನಾಗರಿಕ ಪೂರೈಕೆ ಮತ್ತು ಬೆಲೆ ನಿಯಂತ್ರಣ ಸಚಿವ ಗೋವಿಂದಗೌಡೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.