ADVERTISEMENT

ಕಾನ್‌ಸ್ಟೆಬಲ್‌ಗೆ ಬೈಕ್ ಗುದ್ದಿಸಿ ಪರಾರಿ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2021, 19:52 IST
Last Updated 19 ಸೆಪ್ಟೆಂಬರ್ 2021, 19:52 IST

ಬೆಂಗಳೂರು: ಕರ್ತವ್ಯ ನಿರತ ಕಾನ್‌ಸ್ಟೆಬಲ್‌ಗೆ ಬೈಕ್ ಗುದ್ದಿಸಿ ಸವಾರನೊಬ್ಬ ಪರಾರಿಯಾಗಿರುವ ಘಟನೆ ಬಸವೇಶ್ವರನಗರ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದೆ.

ಘಟನೆ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಪ್ರಕರಣದಲ್ಲಿ ಇದುವರೆಗೂ ಆರೋಪಿ ಪತ್ತೆಯಾಗಿಲ್ಲ.

‘ಕದ್ದ ವಾಹನಗಳನ್ನು ಪತ್ತೆ ಮಾಡಲು ಮುಂದಾಗಿದ್ದ ಪೊಲೀಸ್ ಸಿಬ್ಬಂದಿ, ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ವಾಹನಗಳ ತಪಾಸಣೆ ನಡೆಸುತ್ತಿದ್ದರು. ರಸ್ತೆಯಲ್ಲಿ ಹೋಗುತ್ತಿದ್ದ ವಾಹನಗಳನ್ನು ನಿಲ್ಲಿಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.

ADVERTISEMENT

‘ರಾತ್ರಿ 12.30ರ ಸುಮಾರಿಗೆ ಯುವಕನೊಬ್ಬ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದಿದ್ದ. ಆತನನ್ನು ನಿಲ್ಲಿಸಲು ಕಾನ್‌ಸ್ಟೆಬಲ್ ಯತ್ನಿಸಿದ್ದರು. ಅದೇ ಸಂದರ್ಭದಲ್ಲೇ ಕಾನ್‌ಸ್ಟೆಬಲ್‌ಗೆ ಬೈಕ್‌ ಗುದ್ದಿಸಿ, ಯುವಕ ಪರಾರಿಯಾಗಿದ್ದಾನೆ. ಗಾಯಗೊಂಡು ಸ್ಥಳದಲ್ಲೇ ಕುಸಿದುಬಿದ್ದ ಕಾನ್‌ಸ್ಟೆಬಲ್‌ ಅವರನ್ನು ಸಹೋದ್ಯೋಗಿಗಳೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.

‘ಘಟನೆ ದೃಶ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಪತ್ತೆ ಮಾಡಲಾಗುತ್ತಿದೆ’ ಎಂದೂ ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.