ADVERTISEMENT

ಉಡುಪಿ ಉದ್ಯಮಿಗೆ ₹10 ಲಕ್ಷ ದಂಡ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2021, 21:44 IST
Last Updated 20 ಸೆಪ್ಟೆಂಬರ್ 2021, 21:44 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ವಾಸ್ತವಾಂಶ ಮರೆಮಾಚಿದ್ದ ಉಡುಪಿಯ ಉದ್ಯಮಿಗೆ ಹೈಕೋರ್ಟ್‌ ₹10 ಲಕ್ಷ ದಂಡ ವಿಧಿಸಿದೆ.

ಪ್ರಮೋದ್ ಮಧ್ವರಾಜ್ ಒಡೆತನದ ಮೀನು ಸಂಸ್ಕರಣಾ ಘಟಕವನ್ನು ಪರಿಸರ ಕಾನೂನು ಉಲ್ಲಂಘಿಸಿ ನಿರ್ವಹಿಸಲಾಗುತ್ತಿದೆ ಎಂದು ಆರೋಪಿಸಿ ಪ್ರಶಾಂತ್ ಅಮಿನ್ ಅರ್ಜಿ ಸಲ್ಲಿಸಿದ್ದರು.

‘ದಂಡದ ಮೊತ್ತವನ್ನು ಕರ್ನಾಟಕ ವಕೀಲರ ಗುಮಾಸ್ತರ ಕಲ್ಯಾಣ ನಿಧಿಗೆ ಒಂದು ತಿಂಗಳಲ್ಲಿ ಜಮೆ ಮಾಡಬೇಕು’ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ ಆದೇಶಿಸಿದೆ.

ADVERTISEMENT

‘ಒಂದು ತಿಂಗಳಲ್ಲಿ ದಂಡದ ಮೊತ್ತ ಪಾವತಿಸದಿದ್ದರೆ ಉಡುಪಿ ಜಿಲ್ಲಾಧಿಕಾರಿ ವಸೂಲಿ ಮಾಡಬೇಕು’ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.