ADVERTISEMENT

ಎಸ್‌ಎಸ್ಎಲ್‌ಸಿ ಮೌಲ್ಯಮಾಪನ ಮುಂದೂಡಿಕೆ: ಸುರೇಶ್‌ ಕುಮಾರ್‌

​ಪ್ರಜಾವಾಣಿ ವಾರ್ತೆ
Published 12 ಜುಲೈ 2020, 21:09 IST
Last Updated 12 ಜುಲೈ 2020, 21:09 IST
.
.   

ಬೆಂಗಳೂರು: ‘2019– 2020ನೇ ಸಾಲಿನ ಎಸ್ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಸೋಮವಾರದಿಂದ (ಜುಲೈ 13) ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಆರಂಭವಾಗಲಿದೆ. ಆದರೆ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣ ಲಾಕ್‌ಡೌನ್‌ ಘೋಷಿಸಿರುವ ಹಿನ್ನೆಲೆಯಲ್ಲಿ ಮೌಲ್ಯಮಾಪನ ಕಾರ್ಯ ಮುಂದೂಡಲಾಗಿದೆ’ ಎಂದು ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

‘ಈ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಿಗದಿಯಂತೆ ಮೌಲ್ಯಮಾಪನ ಕಾರ್ಯನಡೆಯಲಿದೆ. ಈ ಎರಡು ಜಿಲ್ಲೆಗಳಲ್ಲಿ ಜುಲೈ 14ರಿಂದ 22ರವರೆಗೆ ಲಾಕ್‌ಡೌನ್‌ ಘೋಷಿಸಲಾಗಿದೆ. ಹೀಗಾಗಿ, ಮೌಲ್ಯಮಾಪನ ದಿನಾಂಕವನ್ನು ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು’ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT