ADVERTISEMENT

ಅಪಘಾತ: ಬೈಕ್‌ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2021, 3:59 IST
Last Updated 22 ಸೆಪ್ಟೆಂಬರ್ 2021, 3:59 IST

ಚಿಟಗುಪ್ಪ: ತಾಲ್ಲೂಕಿನ ತಾಳಮಡಗಿ ಸಮೀಪ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಮಾಡಗೂಳ ಗ್ರಾಮದ ಮಲ್ಲಿಕಾರ್ಜುನ ವಿಶ್ವನಾಥ ಕುಲಕರ್ಣಿ (33) ಮೃತರು.

ಮಲ್ಲಿಕಾರ್ಜುನ ಅವರು ಹುಮನಾಬಾದ್ ತಹಶೀಲ್‌ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಂಪ್ಯೂಟರ್‌ ಆಪ್‌ರೇಟರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸಂಜೆ ಸ್ವಗ್ರಾಮಕ್ಕೆ ಮರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ–65 ರಲ್ಲಿ ಎಮ್ಮೆಯೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅವರು ಬೈಕ್‌ನಿಂದ ಕೆಳಗೆ ಬಿದ್ದಿದ್ದಾರೆ. ಆಗ ಕಾರು ಹರಿದು ಮೃತಪಟ್ಟಿದ್ದಾರೆ.

ADVERTISEMENT

ಈ ಸಂಬಂಧ ಮನ್ನಾಏಖ್ಖೇಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.