ADVERTISEMENT

ನೀರಿನ ಅದಾಲತ್‌ ಇಂದು

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2022, 20:04 IST
Last Updated 24 ಆಗಸ್ಟ್ 2022, 20:04 IST

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ವತಿಯಿಂದ ವಿವಿಧ ಉಪವಿಭಾಗಗಳಲ್ಲಿ ಇದೇ 25ರಂದು ನೀರಿನ ಅದಾಲತ್‌ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 9.30ರಿಂದ 11 ಗಂಟೆಯವರೆಗೆ ಅದಾಲತ್‌ ನಡೆಯಲಿದೆ ಎಂದು ಮಂಡಳಿಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ. ನೀರಿನ ಬಿಲ್‌, ನೀರು, ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ವಿಳಂಬ ಸೇರಿ ವಿವಿಧ ಕುಂದುಕೊರತೆಗಳನ್ನು ಪರಿಹರಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಹಾಯವಾಣಿ 1916ಗೆ ಕರೆ ಮಾಡಬಹುದು ಅಥವಾ ವಾಟ್ಸ್‌ಆ್ಯಪ್‌ ಸಂಖ್ಯೆ: 8762228888ಗೆ ಸಂದೇಶ ಕಳುಹಿಸುವ ಮೂಲಕವೂ ದೂರು ದಾಖಲಿಸಬಹುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT