ADVERTISEMENT

ಐವರಿಗೆ ಸೋಂಕು, ಆರು ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2021, 4:15 IST
Last Updated 21 ಸೆಪ್ಟೆಂಬರ್ 2021, 4:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ ಐವರಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ಆರು ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.

ಸಕ್ರಿಯ ಪ್ರಕರಣಗಳು 49 ಇವೆ. ಇಬ್ಬರು ಐಸಿಯುನಲ್ಲಿ, 18 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.ಜಿಲ್ಲೆಯಲ್ಲಿ ಇದುವರೆಗೆ 32,444 ಪ್ರಕರಣಗಳು ದೃಢಪಟ್ಟಿವೆ. 31,857 ಮಂದಿ ಗುಣಮುಖರಾಗಿದ್ದಾರೆ.

ಸೋಮವಾರ 1,857 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1,852 ಜನರ ವರದಿಗಳು ನೆಗೆಟಿವ್‌ ಬಂದಿವೆ. ಐವರಿಗೆ ಸೋಂಕು ಇರುವುದು ಖಚಿತವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.