ADVERTISEMENT

ಆರು ಪ್ರಕರಣ ದೃಢ, ಎಂಟು ಮಂದಿ ಸೋಂಕು ಮುಕ್ತ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2021, 3:25 IST
Last Updated 26 ಸೆಪ್ಟೆಂಬರ್ 2021, 3:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯ ಆರು ಮಂದಿಗೆ ಶನಿವಾರ ಕೋವಿಡ್‌ ಇರುವುದು ದೃಢಪಟ್ಟಿದೆ. ಈ ಪೈಕಿ ಒಬ್ಬರಿಗೆ ಮಂಡ್ಯದಲ್ಲಿ ನಡೆಸಿದ ಪರೀಕ್ಷೆಯಲ್ಲಿ ಸೋಂಕು ಖಚಿತವಾಗಿದೆ. ಎಂಟು ಮಂದಿ ಗುಣಮುಖರಾಗಿದ್ದು, ಸಾವು ಸಂಭವಿಸಿಲ್ಲ.

ಸೋಂಕಿತರ ಸಂಖ್ಯೆ 46ಕ್ಕೆ ಇಳಿದಿದೆ. ಸೋಂಕಿತರ ಪೈಕಿ ಐಸಿಯುನಲ್ಲಿ ಇಬ್ಬರು, 18 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ ದೃಢಪಟ್ಟ ಪ್ರಕರಣಗಳ ಸಂಖ್ಯೆ 32,473ಕ್ಕೆ ಏರಿದೆ. 31,889 ಮಂದಿ ಗುಣಮುಖರಾಗಿದ್ದಾರೆ.

ADVERTISEMENT

ಶನಿವಾರ2,640 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 2,635 ಮಂದಿಯ ವರದಿಗಳು ನೆಗೆಟಿವ್‌ ಬಂದಿವೆ. ಐವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.