
ಪ್ರಜಾವಾಣಿ ವಾರ್ತೆಚಿಕ್ಕಮಗಳೂರು: ಕೋವಿಡ್ ತಗುಲಿದ್ದ ನಗರದ 69 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಬುಧವಾರ14 ಮಂದಿಗೆ ಕೋವಿಡ್ ದೃಢಪಟ್ಟಿದ್ದು, ಐವರು ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಎರಡನೇ ಅಲೆಯ ಕಾಣಿಸಿಕೊಂಡ ನಂತರ ಮೊದಲ ಸಾವು ಇದಾಗಿದೆ.
ಕೋವಿಡ್ ದೃಢ ಪ್ರಕರಣಗಳ ತಾಲ್ಲೂಕುವಾರು ಅಂಕಿಅಂಶ: ಚಿಕ್ಕಮಗಳೂರು, ಕೊಪ್ಪ, ತರೀಕೆರೆ ತಲಾ 4 ಹಾಗೂ ಕಡೂರು– ಇಬ್ಬರಿಗೆ ಪತ್ತೆಯಾಗಿದೆ.
ಕೋವಿಡ್ ಪರೀಕ್ಷೆಗೆ ಬುಧವಾರ1639 ಮಂದಿಯ ಮಾದರಿ ಸಂಗ್ರಹಿಸಲಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳು 120 ಇವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಚ್.ಕೆ.ಮಂಜುನಾಥ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.