ADVERTISEMENT

23 ಲಕ್ಷ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್: ಕೆಎಸ್‌ಆರ್‌ಟಿಸಿ ಘೋಷಣೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2021, 21:37 IST
Last Updated 10 ಜುಲೈ 2021, 21:37 IST
ಕೆಎಸ್‌ಆರ್‌ಟಿಸಿ (ಸಾಂದರ್ಭಿಕ ಚಿತ್ರ)
ಕೆಎಸ್‌ಆರ್‌ಟಿಸಿ (ಸಾಂದರ್ಭಿಕ ಚಿತ್ರ)   

ಹೊಳಲ್ಕೆರೆ (ಚಿತ್ರದುರ್ಗ ಜಿಲ್ಲೆ): ‘ರಾಜ್ಯದ 23 ಲಕ್ಷ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಿಸಲು ತೀರ್ಮಾನಿಸಲಾಗಿದೆ’ ಎಂದು ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಂ.ಚಂದ್ರಪ್ಪ ಭರವಸೆ ನೀಡಿದರು.

ಪಟ್ಟಣದಲ್ಲಿ ಕಾರ್ಮಿಕ ಇಲಾಖೆ ಶನಿವಾರ ಆಯೋಜಿಸಿದ್ದ ಆಹಾರದ ಕಿಟ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಇನ್ನು 2, 3 ತಿಂಗಳಲ್ಲಿ ಬಸ್‌ ಪಾಸ್ ವಿತರಿಸಲಾಗುವುದು. ಕಟ್ಟಡ ಕಾರ್ಮಿಕರು ಬೇರೆ ಕಡೆ ಕೆಲಸಕ್ಕೆ ಹೋಗುವಾಗ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು’ ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.