ಹೊಳಲ್ಕೆರೆ (ಚಿತ್ರದುರ್ಗ ಜಿಲ್ಲೆ): ‘ರಾಜ್ಯದ 23 ಲಕ್ಷ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಿಸಲು ತೀರ್ಮಾನಿಸಲಾಗಿದೆ’ ಎಂದು ಕೆಎಸ್ಆರ್ಟಿಸಿ ಅಧ್ಯಕ್ಷ ಎಂ.ಚಂದ್ರಪ್ಪ ಭರವಸೆ ನೀಡಿದರು.
ಪಟ್ಟಣದಲ್ಲಿ ಕಾರ್ಮಿಕ ಇಲಾಖೆ ಶನಿವಾರ ಆಯೋಜಿಸಿದ್ದ ಆಹಾರದ ಕಿಟ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಇನ್ನು 2, 3 ತಿಂಗಳಲ್ಲಿ ಬಸ್ ಪಾಸ್ ವಿತರಿಸಲಾಗುವುದು. ಕಟ್ಟಡ ಕಾರ್ಮಿಕರು ಬೇರೆ ಕಡೆ ಕೆಲಸಕ್ಕೆ ಹೋಗುವಾಗ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು’ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.