ADVERTISEMENT

ಭಾನುಮತಿ, ಶ್ರೀಧರ ಬಳಗಾರ್‌ಗೆ ಪ್ರಶಸ್ತಿ

23ರಂದು ಪ್ರಶಸ್ತಿ ಪ್ರದಾನ ಸಮಾರಂಭ

​ಪ್ರಜಾವಾಣಿ ವಾರ್ತೆ
Published 20 ಜನವರಿ 2020, 18:44 IST
Last Updated 20 ಜನವರಿ 2020, 18:44 IST
ಬಳಗಾರ ಹಾಗೂ ಭಾನುಮತಿ
ಬಳಗಾರ ಹಾಗೂ ಭಾನುಮತಿ    

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜಿನ ಶಿವರಾಮ ಕಾರಂತ ಅಧ್ಯಯನ ಕೇಂದ್ರ ಮತ್ತು ಕನ್ನಡ ಸಂಘದ ಸಹಯೋಗದಲ್ಲಿ ನೀಡುವ ‘ನಿರಂಜನ ಪ್ರಶಸ್ತಿ’ಗೆ ಸಂಶೋಧಕಿ ಡಾ. ವೈ. ಸಿ. ಭಾನುಮತಿ ಹಾಗೂ ಸಿದ್ದಮೂಲೆ ಶಂಕರನಾರಾಯಣ ಭಟ್ ಸ್ಥಾಪಿತ ‘ಶಂಕರ ಸಾಹಿತ್ಯ ಪ್ರಶಸ್ತಿ’ಗೆ ಕಥೆಗಾರ ಶ್ರೀಧರ ಬಳಗಾರ್ ಅವರನ್ನು ಆಯ್ಕೆ ಮಾಡಲಾಗಿದೆ.

‘ನಿರಂಜನ ಪ್ರಶಸ್ತಿ’ಯು ₹15 ಸಾವಿರ, ಶಂಕರ ಸಾಹಿತ್ಯ ಪ್ರಶಸ್ತಿ ₹5 ಸಾವಿರ ನಗದು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಇದೇ 23ರಂದು ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT