ಮೂಲ್ಕಿ: ಇಲ್ಲಿನ ಲಿಂಗಪ್ಪಯ್ಯಕಾಡಿನ ಆಶ್ರಯ ಕಾಲೊನಿಯ ಬಳಿಯಲ್ಲಿ ದಾಸ್ತಾನು ಇಟ್ಟಿದ್ದ ಸಿಮೆಂಟ್ ಪೈಪ್ ಬುಧವಾರ ಉರುಳಿ ಬಿದ್ದ ಪರಿಣಾಮ ಮಗುವೊಂದು ಮೃತಪಟ್ಟಿದೆ.
ಲಿಂಗಪ್ಪಯ್ಯ ಕಾಡಿನ ನಿವಾಸಿ ರಾಮು ಎಂಬುವರ ಮಗ ಯುವರಾಜ (4) ಮೃತಪಟ್ಟ ಬಾಲಕ. ನಾಗರಾಜ್ ಎಂಬುವರ ಕಂಪನಿಯ ಸಿಮೆಂಟ್ ಪೈಪ್ಗಳನ್ನು ದಾಸ್ತಾನು ಇಡಲಾಗಿತ್ತು. ಅಲ್ಲಿಯೇ ಆಟವಾಡುತ್ತಿದ್ದ ಮಗುವಿನ ಮೇಲೆ ಪೈಪ್ ಬಿದ್ದಿದ್ದು, ತಕ್ಷಣ ಮಗುವನ್ನು ಮುಕ್ಕದ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ. ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.