ADVERTISEMENT

ಸಾಹಿತಿ ಉದಯ ಧರ್ಮಸ್ಥಳ ನಿಧನ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2022, 19:16 IST
Last Updated 19 ಆಗಸ್ಟ್ 2022, 19:16 IST
ಉದಯ ಧರ್ಮಸ್ಥಳ
ಉದಯ ಧರ್ಮಸ್ಥಳ   

ಮಂಗಳೂರು: ಸಾಹಿತಿ ಉದಯ ಧರ್ಮಸ್ಥಳ (64) ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಶುಕ್ರವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು.

ಧರ್ಮಸ್ಥಳದವರಾದ ಅವರು ಬೆಂಗಳೂರಿನ ಮಾರತಹಳ್ಳಿಯಲ್ಲಿ ನೆಲೆಸಿದ್ದರು. ಸನಾತನ ಸಾರಥಿ ಪತ್ರಿಕೆಯ ಸಂಪಾದಕರಾಗಿದ್ದ ಅವರು ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದ ಸಾಹಿತ್ಯ ಕೃಷಿಯಲ್ಲೂ ತೊಡಗಿಸಿಕೊಂಡಿದ್ದರು.

ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ತುಳುವನ್ನು ಸಂವಿಧಾನದ 8ನೇ ಪರಿಚ್ಚೇದಕ್ಕೆ ಸೇರ್ಪಡೆ ಮಾಡುವುದಕ್ಕೆ ಸಂಬಂಧಿಸಿದ ಹೋರಾಟದಲ್ಲೂ ಸಕ್ರಿಯರಾಗಿದ್ದರು.

ADVERTISEMENT

ಅವರಿಗೆ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.