ದಾವಣಗೆರೆ: ಇಲ್ಲಿನ ರಿಂಗ್ ರಸ್ತೆಯಲ್ಲಿ ಕಲ್ಲು ಎತ್ತಿಹಾಕಿ ಯುವಕನನ್ನು ಕೊಲೆ ಮಾಡಲಾಗಿದೆ.
ರಿಂಗ್ ರೋಡ್ ರಸ್ತೆಯ ಶಾರದಾಂಬಾ ದೇವಸ್ಥಾನದ ಬಳಿ ಸುಮಾರು ಯುವಕನ ಮೃತದೇಹ ಪತ್ತೆಯಾಗಿದೆ.
ಯುವಕನ ಮುಖ ಜಜ್ಜಿ ಹೋಗಿದೆ. ಯುವಕ ಯಾರು? ಕೊಂದವರು ಯಾರು? ಕಾರಣ ಏನು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.