ADVERTISEMENT

25ರಂದು ದಾವಣಗೆರೆಗೆ ಮೋದಿ: ಸಭಿಕರ ಮಧ್ಯೆ ಪ್ರಧಾನಿ ಮೋದಿ ‘ಮೆರವಣಿಗೆ’

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2023, 18:15 IST
Last Updated 23 ಮಾರ್ಚ್ 2023, 18:15 IST
ನರೇಂದ್ರ ಮೋದಿ
ನರೇಂದ್ರ ಮೋದಿ    

ದಾವಣಗೆರೆ: ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ‘ಮಹಾಸಂಗಮ’ ಸಮಾರೋಪ ಮಾರ್ಚ್‌ 25ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸಭಿಕರ ನಡುವೆ ಪೆಂಡಾಲ್‌ ಒಳಗೆ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಿದ್ದಾರೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್‌ ಟೆಂಗಿನಕಾಯಿ, ಸಂಸದ ಜಿ.ಎಂ.ಸಿದ್ದೇಶ್ವರ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.

‘ರಾಜ್ಯದ ವಿವಿಧೆಡೆ ರೋಡ್‌ ಶೋ ನಡೆದಿದೆ. ದಾವಣಗೆರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಭಿಕರ ನಡುವೆ ಹಾದು ಹೋಗಬೇಕು ಎಂದು ಪ್ರಧಾನಿಯವರೇ ಆಶಯ ವ್ಯಕ್ತಪಡಿಸಿದ್ದು, ಇದೇ ಮೊದಲ ಬಾರಿಗೆ ಪೆಂಡಾಲ್‌ ಒಳಗೆ ತೆರೆದ ವಾಹನದಲ್ಲಿ ಕೈಬೀಸುತ್ತ ವೇದಿಕೆಯತ್ತ ತೆರಳಲಿದ್ದಾರೆ’ ಎಂದು ಮಾಹಿತಿ ನೀಡಿದರು.

ADVERTISEMENT

‘ಮಿಷನ್‌–150’ ಗುರಿಯೊಂದಿಗೆ ಬಿಜೆಪಿ ಮಾರ್ಚ್‌ 1ರಿಂದ ನಾಲ್ಕು ಕಡೆಗಳಿಂದ ಆರಂಬಿಸಿದ್ದ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ದಾವಣಗೆರೆಯಲ್ಲಿ ನಡೆಯುತ್ತಿದೆ. 10 ಲಕ್ಷ ಜನ ಭಾಗವಹಿಸುವ
ನಿರೀಕ್ಷೆ ಇದೆ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬರುವ ಪ್ರಧಾನಿ, ಅಲ್ಲಿಂದ ಹೆಲಿಕಾಫ್ಟರ್‌ನಲ್ಲಿ ಮಧ್ಯಾಹ್ನ 3ಕ್ಕೆ ದಾವಣಗೆರೆ ತಲುಪುವರು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.