ADVERTISEMENT

ವ್ಯಕ್ತಿ ಪರಾರಿ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2023, 4:27 IST
Last Updated 21 ಮಾರ್ಚ್ 2023, 4:27 IST

ಹುಬ್ಬಳ್ಳಿ: ಗದಗ ಜಿಲ್ಲೆಗೆ ಗಡಿಪಾರು ಮಾಡಲೆಂದು ಕಲಬುರಗಿ ಜಿಲ್ಲೆಯ ಕಮಲಾಪುರದಿಂದ ಪೊಲೀಸರು ಕರೆದುಕೊಂಡು ಬರುತ್ತಿದ್ದ ಆರೋಪಿ ಮೈನೋದ್ದೀನ್ ಲಾಡ್ಲೆಸಾಬ (47) ಎಂಬಾತ ನಗರದ ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದಿಂದ ಪರಾರಿಯಾಗಿದ್ದಾನೆ.

ಭಾನುವಾರ ಬೆಳಿಗ್ಗೆ ಬಸ್ ನಿಲ್ದಾಣಕ್ಕೆ ಬಂದಾಗ, ಹೊಟ್ಟೆ ನೋವು ಎಂದು ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿದ್ದ ಆರೋಪಿ, ಕಣ್ತಪ್ಪಿಸಿ ಓಡಿ ಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೋಕುಲ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.