ADVERTISEMENT

ಹರಪನಹಳ್ಳಿ| ಪ್ರವೇಶ ಪತ್ರ ಇದ್ದರೂ ಪಿಯುಸಿ ಪರೀಕ್ಷೆ ಬರೆಯಲು ದೊರೆಯದ ಅವಕಾಶ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2023, 8:03 IST
Last Updated 10 ಮಾರ್ಚ್ 2023, 8:03 IST
   

ಹರಪನಹಳ್ಳಿ (ವಿಜಯನಗರ ಜಿಲ್ಲೆ): ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಬಂದಿದ್ದ 30ಕ್ಕೂ ಹೆಚ್ಚಿನ ವಿದ್ಯಾರ್ಥಿಗಳ ಹಾಜರಾತಿ ಶೇ 75ಕ್ಕಿಂತ ಕಡಿಮೆ ಇದ್ದಿದ್ದರಿಂದ ಪಿಯು ಮಂಡಳಿಯು ಅವರ ಹೆಸರಿನ ಒಎಂಆರ್ ಶೀಟ್ ಕಳುಹಿಸದ ಕಾರಣ ಗುರುವಾರ ಅವರಿಗೆ ಪರೀಕ್ಷೆ ಬರೆಯಲು ಸಾಧ್ಯವಾಗಲಿಲ್ಲ.

‘ಪಟ್ಟಣದ ಎಚ್.ಪಿ.ಎಸ್. ಪಿಯು ಕಾಲೇಜಿನ ಒಟ್ಟು 39 ವಿದ್ಯಾರ್ಥಿಗಳ ಹಾಜರಾತಿ ಶೇ 75ಕ್ಕಿಂತ ಕಡಿಮೆ ಇತ್ತು. ಅದರಲ್ಲಿ 30 ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರವೇಶ ಪತ್ರಗಳು ಬಂದಿವೆ. ಆದರೆ, ಒಎಂಆರ್ ಶೀಟ್‌ನಲ್ಲಿ ಇವರ ಹೆಸರುಗಳಿಲ್ಲ. ಹೀಗಾಗಿ ಅವರಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಲ್ಲ’ ಎಂದು ಪರೀಕ್ಷಾ ಕೇಂದ್ರದ ನೋಡಲ್ ಅಧಿಕಾರಿ ವೆಂಕಟೇಶ್ ತಿಳಿಸಿದ್ದಾರೆ.

‘ವಿದ್ಯಾರ್ಥಿಗಳ ಹಾಜರಾತಿ ಶೇ 75ಕ್ಕಿಂತ ಕಡಿಮೆಯಿದ್ದ ಕಾರಣ ಪರೀಕ್ಷೆಗೆ ಅವಕಾಶ ಕಲ್ಪಿಸಿಲ್ಲ.‌ ಈ ವಿಷಯ ಅಧಿಕಾರಿಗಳ‌ ಗಮನಕ್ಕೆ ತರಲಾಗಿದೆ. ಎಲ್ಲ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ ಕಲ್ಪಿಸಲಾಗುವುದು’ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಉಪನಿರ್ದೇಶಕ ಎಚ್.ಸುಗೇಂದ್ರ ಪ್ರತಿಕ್ರಿಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.