ADVERTISEMENT

ಹಾಸನ: ಕಂದಾಯ ನಿರೀಕ್ಷಕ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2021, 14:11 IST
Last Updated 22 ಸೆಪ್ಟೆಂಬರ್ 2021, 14:11 IST

ಹಾಸನ: ಸಕಲೇಶಪುರ ಪುರಸಭೆ ಕಂದಾಯ ನಿರೀಕ್ಷಕ ಗೋಪಾಲಕೃಷ್ಣ (41) ನಗರದಲ್ಲಿ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಗರದ ಹೊರ ವಲಯದ ಚಿಕ್ಕಕೊಂಡಗೊಳ ನಿವಾಸಿಯಾಗಿದ್ದ ಗೋಪಾಲಕೃಷ್ಣ, ಎರಡು ವರ್ಷಗಳಿಂದ ಸಕಲೇಶಪುರ ಪುರಸಭೆ ಕಂದಾಯ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸತ್ಯ ಮಂಗಲ ಬಡಾವಣೆಯ ತಮ್ಮ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೆಳಗ್ಗೆ ಟೆರೇಸ್ ಮೇಲೆ ನೇಣಿಗೆ ಶರಣಾಗಿದ್ದಾರೆ.

‘ನನಗೆ ಬದುಕಲು ಇಷ್ಟವಿಲ್ಲ. ಆದ್ದರಿಂದ ಸಾಯುತ್ತಿದ್ದೇನೆ’ ಎಂದು ಗೋಪಾಲಕೃಷ್ಣ ಮರಣ ಪತ್ರದಲ್ಲಿ ಬರೆದಿದ್ದಾರೆಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಅನಾರೋಗ್ಯ ಕಾರಣದಿಂದಲೇ ಬೇಲೂರು ತಾಲೂಕು ಅರೇಹಳ್ಳಿ ಹೋಬಳಿ ಗ್ರಾಮ ಲೆಕ್ಕಿಗರೊಬ್ಬರು ಮೊನ್ನೆಯಷ್ಟೇ ಆತ್ಮಹತ್ಯೆ ಮಾಡಿಕೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.