ADVERTISEMENT

ಸಿದ್ದರಾಮಯ್ಯ ಬಯಸಿದರೆ ಆಳಂದ ಕ್ಷೇತ್ರ ಬಿಟ್ಟು ಕೊಡುವೆ: ಬಿ.ಆರ್. ಪಾಟೀಲ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2023, 10:01 IST
Last Updated 21 ಮಾರ್ಚ್ 2023, 10:01 IST
ಬಿ.ಆರ್.ಪಾಟೀಲ
ಬಿ.ಆರ್.ಪಾಟೀಲ   

ಕಲಬುರಗಿ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಯಸಿದರೆ ಅವರಿಗಾಗಿ ಆಳಂದ ಕ್ಷೇತ್ರವನ್ನು ಬಿಟ್ಟು ಕೊಡುತ್ತೇನೆ ಎಂದು ಮಾಜಿ ಶಾಸಕ ಬಿ.ಆರ್. ಪಾಟೀಲ ಸ್ಪಷ್ಟಪಡಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಸಿದ್ದರಾಮಯ್ಯ ಅವರು ನನಗೆ ಮೊದಲಿನಿಂದಲೂ ಆಪ್ತರು. ಇಬ್ಬರೂ ಒಂದೇ ಸಮಯಕ್ಕೆ ರಾಜಕಾರಣ ಪ್ರವೇಶ ಮಾಡಿದ್ದೇವೆ. ಅವರು ಇಲ್ಲಿಂದ ಸ್ಪರ್ಧಿಸಲು ಬಯಸಿದರೆ ಅತ್ಯಂತ ಸಂತೋಷದಿಂದ ಅವರಿಗಾಗಿ ಕ್ಷೇತ್ರ ಬಿಟ್ಟು ಕೊಡುತ್ತೇನೆ. ಅವರು ಒಮ್ಮೆ ಬಂದು ನಾಮಪತ್ರ ಸಲ್ಲಿಸಿ ಹೋದರೂ ಸಾಕು. ನಾನೇ ಮುಂದೆ ನಿಂತು ಅವರನ್ನು ಗೆಲ್ಲಿಸಿಕೊಂಡು ಬರುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT