ADVERTISEMENT

ಮೋದಿಯವರದು ಬಾಯಿ ಮಾತಿನ ದಲಿತ ಪ್ರೀತಿ: ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಟೀಕೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2021, 6:29 IST
Last Updated 19 ಅಕ್ಟೋಬರ್ 2021, 6:29 IST
ರಣದೀಪ್‌ಸಿಂಗ್ ಸುರ್ಜೇವಾಲಾ
ರಣದೀಪ್‌ಸಿಂಗ್ ಸುರ್ಜೇವಾಲಾ   

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರ ಬಿಜೆಪಿ ಯಾವ ರಾಜ್ಯದಲ್ಲೂ ದಲಿತ ಮುಖ್ಯಮಂತ್ರಿಯನ್ನು ಮಾಡಿಲ್ಲ. ಆದರೆ ನಾವು ಪಂಜಾಬ್‌ನಲ್ಲಿ ದಲಿತಮುಖ್ಯಮಂತ್ರಿ ಮಾಡಿದ್ದೇವೆ. ಮೋದಿಯದ್ದು ಬರಿ ಬಾಯಿ ಮಾತಿನ ದಲಿತ ಪ್ರೀತಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಆರೋಪಿಸಿದರು.

ಸಿಂದಗಿ ‌ಉಪಚುನಾವಣೆ ಪ್ರಚಾರಕ್ಕೆ ತೆರಳಲು‌ ನಗರದ ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ತೈಲ ಬೆಲೆ, ಅನಿಲ ಬೆಲೆ, ಅಗತ್ಯ ವಸ್ತುಗಳ ಬೆಲೆ ನೋಡಿದರೆ ಜನರನ್ನು ಹೇಗೆ ಲೂಟಿ ಮಾಡುತ್ತಿದೆ ಎಂಬುದು ಗೊತ್ತಾಗುತ್ತದೆ ಎಂದರು.

ADVERTISEMENT

ವಿದೇಶದ ತೊಗರಿ ಬೇಳೆ ದೇಶಕ್ಕೆ ಬರಲಿದೆ. ನಮ್ಮ ದೇಶದ ರೈತರ ಬೇಳೆ ಮಾರಾಟ ಆಗದು ಎಂದು ಹೇಳಿದರು.

ತಮ್ಮನ್ನು ರಾಜ್ಯ ಉಸ್ತುವಾರಿಯಿಂದ ಬದಲಾಯಿಸುವಂತೆ ರಾಜ್ಯದ ನಾಯಕರು ಕಾಂಗ್ರೆಸ್ ಅಧ್ಯಕ್ಷೆ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯೆ ನೀಡಿದ ಸುರ್ಜೇವಾಲಾ, ಕಾಂಗ್ರೆಸ್ ಒಂದು ಕುಟುಂಬ. ಕುಟುಂಬದ ಮುಖ್ಯಸ್ಥರಿಗೆ ಪತ್ರ ಬರೆಯಲು ಮುಕ್ತ ಅವಕಾಶ ಇದೆ. ಪಕ್ಷದ ಯಾರೇ ಕಾರ್ಯಕರ್ತರು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆಯಬಹುದು. ತಮ್ಮ ಅಭಿಪ್ರಾಯವನ್ನು ತಿಳಿಸುವುದರಲ್ಲಿ ತಪ್ಪೇನಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.