ADVERTISEMENT

ಸಚಿವ ಸ್ಥಾನಕ್ಕೆ ಆಗ್ರಹ: ಸಿಎಂ ಭೇಟಿಗೆ ಬೆಂಗಳೂರಿನತ್ತ ಹೊರಟ ರಂಜನ್‌ ಬೆಂಬಲಿಗರು

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2021, 3:09 IST
Last Updated 10 ಆಗಸ್ಟ್ 2021, 3:09 IST
ಅಪ್ಪಚ್ಚು ರಂಜನ್ ಬೆಂಬಲಿಗರ ಬೆಂಗಳೂರು ಚಲೋಗೆ ಕುಶಾಲನಗರದಲ್ಲಿ ಚಾಲನೆ
ಅಪ್ಪಚ್ಚು ರಂಜನ್ ಬೆಂಬಲಿಗರ ಬೆಂಗಳೂರು ಚಲೋಗೆ ಕುಶಾಲನಗರದಲ್ಲಿ ಚಾಲನೆ   

ಕುಶಾಲನಗರ (ಕೊಡಗು): ಶಾಸಕ ಎಂ.ಪಿ.ಅಪ್ಪಚ್ಚು ರಂಜನ್‌ಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ, ಅವರ ಬೆಂಬಲಿಗರು ಬೆಂಗಳೂರು ಚಲೋ ಹಮ್ಮಿಕೊಂಡಿದ್ದು, ಮಂಗಳವಾರ ಬೆಳಿಗ್ಗೆ ಕುಶಾಲನಗರದಲ್ಲಿ ಚಲೋಗೆ ಚಾಲನೆ ಸಿಕ್ಕಿತು.

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಕೊಡಗು ಜಿಲ್ಲೆಗೆ ಪ್ರಾತಿನಿಧ್ಯ ಸಿಕ್ಕಿಲ್ಲ. ಜಿಲ್ಲೆಗೆ ಅನ್ಯಾಯವಾಗಿದೆ. ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ನಮ್ಮ ಮನವಿ ಸಲ್ಲಿಸುತ್ತೇವೆ’ ಎಂದು ಬೆಂಬಲಿಗರು ಹೇಳಿದರು.

ಕುಶಾಲನಗರ ಬೈಚನಹಳ್ಳಿ ಮಾರಿಯಮ್ಮ ದೇವಾಲಯದ ಬಳಿಯಿಂದ ಈ ಜಾಥಾ ಆರಂಭಗೊಂಡಿತು. ಕುಶಾಲನಗರ ತಾಲ್ಲೂಕಿನ ಪಕ್ಷದ ಮುಖಂಡರು, ರಂಜನ್‌ ಅಭಿಮಾನಿಗಳು, ಪಟ್ಟಣ ಪಂಚಾಯಿತಿ ಸದಸ್ಯರು ಕಾರುಗಳಲ್ಲಿ ಬೆಂಗಳೂರಿಗೆ ತೆರಳುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.