ADVERTISEMENT

ಇಂದು ಅರಸು ಜನ್ಮ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2021, 2:54 IST
Last Updated 20 ಆಗಸ್ಟ್ 2021, 2:54 IST

ಮಡಿಕೇರಿ: ಜಿಲ್ಲಾ ಅಹಿಂದ ಒಕ್ಕೂಟ ಮತ್ತು ಸಹಮತ ವೇದಿಕೆಯ ಆಶ್ರಯದಲ್ಲಿ ಆ.20ರಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿಂದುಳಿದ ವರ್ಗಗಳ ಹರಿಕಾರ ದಿವಂಗತ ಡಿ. ದೇವರಾಜ ಅರಸು ಅವರ 106ನೇ ಜನ್ಮ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಮಧ್ಯಾಹ್ನ 2.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಾಜಿ ಸಚಿವ ಎಂ.ಸಿ.ನಾಣಯ್ಯ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಅಹಿಂದ ಒಕ್ಕೂಟದ ಅಧ್ಯಕ್ಷ ಟಿ.ಎಂ. ಮುದ್ದಯ್ಯ ವಹಿಸಲಿದ್ದಾರೆ. ಸಹಮತ ವೇದಿಕೆಯ ಅಧ್ಯಕ್ಷ ಟಿ.ಪಿ.ರಮೇಶ್ ಪ್ರಾಸ್ತಾವಿಕ ಮಾತನಾಡಲಿದ್ದಾರೆ. ಹಿರಿಯ ವಕೀಲರಾದ ಎಚ್.ಎಸ್.ಚಂದ್ರಮೌಳಿ ಹಾಗೂ ಎ.ಎಸ್. ಪೊನ್ನಣ್ಣ ವಿಷಯ ಮಂಡಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಿರಿಯ ಕಾರ್ಮಿಕ ನಾಯಕ ಭರತ್, ಗಾಯಕ ಎಂ.ಎಂ. ಲಿಯಾಖತ್ ಆಲಿ ಮತ್ತು ಸಮಾಜ ಸೇವಕ ಹಾಗೂ ಡಿಎಸ್‍ಎಸ್ ಅಧ್ಯಕ್ಷ ಎಚ್.ಎಲ್. ದಿವಾಕರ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT