ವಿರಾಜಪೇಟೆ: ಹಸು ತಿವಿದು ಗಂಭೀರವಾಗಿ ಗಾಯಗೊಂಡಿದ್ದ ಅಮ್ಮತ್ತಿ ಕಾರ್ಮಾಡು ಗ್ರಾಮದ ಜವರಮ್ಮ (78) ಸೋಮವಾರ ಮೃತಪಟ್ಟಿದ್ದಾರೆ.
ಜೂ.27 ರಂದು ಔಷಧಿ ಖರೀದಿಸಲು ಅಮ್ಮತ್ತಿ ಪಟ್ಟಣಕ್ಕೆ ಹೋದ ಸಂದರ್ಭ ಜವರಮ್ಮ ಅವರಿಗೆ ಹಸು ತಿವಿದಿತ್ತು. ನೆಲಕ್ಕೆ ಬಿದ್ದ ಜವರಮ್ಮ ಅವರ ತಲೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದವು. ಅಮ್ಮತ್ತಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆಗೆ ಸ್ಪಂದಿಸದೇಸೋಮವಾರ ಜವರಮ್ಮ ಮೃತಪಟ್ಟಿದ್ದಾರೆ.
ವಿರಾಜಪೇಟೆಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.