ನಾಪೋಕ್ಲು: ಸಮೀಪದ ಕಕ್ಕಬ್ಬೆ ವ್ಯಾಪ್ತಿಯ ಇಗ್ಗುತಪ್ಪ ಬೆಟ್ಟದಲ್ಲಿ ಕಾಣಿಸಿಕೊಂಡ ಬೆಂಕಿ ವ್ಯಾಪಕವಾಗಿ ಹಬ್ಬಿದ್ದು ಭಾನುವಾರ ತಹಬದಿಗೆ ತರಲಾಯಿತು.
ಶುಕ್ರವಾರ ಸಂಜೆ ಹೊತ್ತಿಗೆ ಮಲ್ಮ ಬೆಟ್ಟ ಶ್ರೇಣಿಯಲ್ಲಿ ಉರಿಯುತ್ತಿದ್ದ ಬೆಂಕಿ ರಾತ್ರಿ ಹೊತ್ತಿಗೆ ಸುತ್ತಮುತ್ತಲ ಪ್ರದೇಶಗಳಿಗೆ ಹರಡಿದ್ದು ನೂರಾರ ಎಕರೆ ಪ್ರದೇಶ ಬೆಂಕಿಗೆ ಆಹುತಿಯಾಗಿದೆ.
ಭಾಗಮಂಡಲ ವಲಯ ಅರಣ್ಯಾಧಿಕಾರಿಗಳು ಮಡಿಕೇರಿಯ ಅಗ್ನಿಶಾಮಕ ಪಡೆಯ ಸಿಬ್ಬಂದಿ ಅರಣ್ಯ ಇಲಾಖೆ ಸಿಬ್ಬಂದಿಯೊಂದಿಗೆ ಬೆಂಕಿ ನಂದಿಸಲು ಶ್ರಮಿಸಿದರು. ಭಾನುವಾರ ಬೆಂಕಿ ನಿಯಂತ್ರಣಕ್ಕೆ ಬಂತು. ಭಾಗಮಂಡಲ ವಲಯ ಅರಣ್ಯಾಧಿಕಾರಿ ರವೀಂದ್ರ ಸಿ.ಎಂ. ಮತ್ತು ಸಿಬ್ಬಂದಿ ಬೆಂಕಿಯನ್ನು ತಹಬದಿಗೆ ತರಲು ಶ್ರಮಿಸಿದರು.
ಸಮೀಪದ ವಾಟೆಕಾಡು ಪ್ರದೇಶದಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡಿದ್ದು ಅಲ್ಲಿನ ನಿವಾಸಿ ಮುಕ್ಕಾಟಿರ ವಿನು ಬೆಳ್ಯಪ್ಪ ಅವರ ಅಡಿಕೆ ತೋಟ ಹಾಗೂ ಕಾಫಿ ತೋಟ ಬೆಂಕಿಗೆ ಆಹುತಿಯಾಗಿದ್ದು ನಷ್ಟ ಸಂಭವಿಸಿದೆ. ಸ್ಥಳೀಯರ ನೆರವಿನೊಂದಿಗೆ ಬೆಂಕಿ ನಂದಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.