ADVERTISEMENT

ಕೊಡಗು: ಧಾರಾಕಾರ ಮಳೆ, ಅಪಾಯದಂಚಿನಲ್ಲಿ ವಾಸಿಸುತ್ತಿರುವವರಿಗೆ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 14 ಜುಲೈ 2021, 6:33 IST
Last Updated 14 ಜುಲೈ 2021, 6:33 IST
   

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ.ಕಾವೇರಿ ನದಿಯಲ್ಲಿ ನೀರಿನಮಟ್ಟ ಏರಿಕೆಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಅಪಾರ ಪ್ರಮಾಣದ ನೀರು ಸಂಗ್ರಹಗೊಂಡಿದೆ. ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.

ಕುಶಾಲನಗರ ಸಮೀಪದ ಹಾರಂಗಿ ಜಲಾಶಯದ ಒಳಹರಿವು 7,753 ಕ್ಯುಸೆಕ್‌‌ಗೆ ಏರಿಕೆಯಾಗಿದೆ. ಮಂಗಳವಾರ ಸಂಜೆ ವೇಳೆಗೆ 3,589 ಕ್ಯುಸೆಕ್ ಇತ್ತು.ಅಪಾಯದ ಸ್ಥಳದಲ್ಲಿ ವಾಸಿಸುತ್ತಿರುವ ಜನರಿಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.