ADVERTISEMENT

ಕೊಡಗು: ಧಾರಾಕಾರ ಮಳೆ, ಹಲವೆಡೆ ಸಂಪರ್ಕ ಕಡಿತ

​ಪ್ರಜಾವಾಣಿ ವಾರ್ತೆ
Published 23 ಜುಲೈ 2021, 6:03 IST
Last Updated 23 ಜುಲೈ 2021, 6:03 IST

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರಿದಿದೆ.‌ ಮಳೆ ಹಾಗೂ ಭಾರೀ ಗಾಳಿಗೆ ಜಿಲ್ಲೆಯ ಜನಜೀವನ ಅಸ್ತವ್ಯಸ್ತವಾಗಿದೆ. ಕಾವೇರಿ ನದಿಯು ಉಕ್ಕಿ ಹರಿಯುತ್ತಿದ್ದು ಅಲ್ಲಲ್ಲಿ ಸಂಪರ್ಕ ಕಡಿತವಾಗಿದೆ.

ನಾಪೋಕ್ಲು- ಅಯ್ಯಂಗೇರಿ ಹಾಗೂ ನಾಲ್ಕೇರಿ- ಶ್ರೀಮಂಗಲ ರಸ್ತೆ ಸಂಪರ್ಕ ಕಡಿತವಾಗಿದೆ. ಗದ್ದೆ ಬಯಲು ಸಮುದ್ರದಂತೆ ಕಾಣಿಸುತ್ತಿವೆ.

ಹಾರಂಗಿ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕುಶಾಲನಗರದಲ್ಲಿ ಪ್ರವಾಹ ಭೀತಿ ಎದುರಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.