ADVERTISEMENT

ಕೊಡಗು | ಉಂಗುರ‌ ನುಂಗಿದ್ದ ಮಗು ಸಾವು

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2023, 11:30 IST
Last Updated 23 ಮಾರ್ಚ್ 2023, 11:30 IST
   

ಸಿದ್ದಾಪುರ (ಕೊಡಗು): ಉಂಗುರ ನುಂಗಿದ್ದ 8 ತಿಂಗಳಿನ ಮಗು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದೆ.

ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದ ನಿವಾಸಿ ಮುನೀರ್ ಅವರ 8 ತಿಂಗಳ ಗಂಡು ಮಗು ಬುಧವಾರ ರಾತ್ರಿ ಆಕಸ್ಮಿಕವಾಗಿ ಉಂಗುರವನ್ನು ನುಂಗಿತ್ತು. ಈ ವೇಳೆ ಉಂಗುರ ಹೊರತೆಗೆಯಲು ಸಾಧ್ಯವಾಗದೇ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು.

ಬಳಿಕ ಮಡಿಕೇರಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಉಂಗುರವನ್ನು ಹೊರತೆಗೆದರು. ಆದರೆ ತೀವ್ರ ಉಸಿರಾಟದ ತೊಂದರೆಯಿಂದ ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.